ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಸಂಭವಿಸಿದೆ. ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ.
ಇದನ್ನು ಗಮನಿಸಿದ ಸಹ ಪ್ರವಾಸಿಗರು ಶಶಾಂಕ್ ನನ್ನು ರಕ್ಷಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ. ಮಿಥುನ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧಕಾರ್ಯ ಮುಂದುವರಿದಿದೆ. ದಸರಾ ರಜೆ ಹಿನ್ನೆಲೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರು ಉಡುಪಿಗೆ ಆಗಮಿಸುತ್ತಿದ್ದಾರೆ. ಸಾವಿರಾರು ಜನರಿಗೆ ಕೇವಲ ಈಜು ಬರದ ಮೂರು ಲೈಫ್ ಗಾರ್ಡ್ ನಿಯೋಜನೆ ಮಾಡಿದ್ದು, ಮಲ್ಪೆ ಬೀಚ್ ನಿರ್ವಹಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಭಾರೀ ನಿರ್ಲಕ್ಷ್ಯ ತೋರುತ್ತಿದೆ. ಎಂಬ ಆರೋಪ ಕೇಳಿಬಂದಿದೆ. ಕಳೆದ ಒಂದು ವಾರದಿಂದ ಜಿಲ್ಲಾಡಳಿತ ಜಲಕ್ರೀಡೆ ಬಂದ್ ಮಾಡಿದೆ. ಇದ್ರಿಂದ ನೂರಾರು ಸಂಖ್ಯೆಯಲ್ಲಿ ಇದ್ದ ಲೈಫ್ ಗಾರ್ಡ್ಗಳು ವಾಪಸ್ ಮನೆಗೆ ಹೋಗಿದ್ದಾರೆ. ಜಿಲ್ಲಾಡಳಿತದ ಭಾರೀ ನಿರ್ಲಕ್ಷ್ಯಕ್ಕೆ ಪ್ರವಾಸಿಗರು ಬಲಿಯಾಗುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…