ಜನ ಮನದ ನಾಡಿ ಮಿಡಿತ

Advertisement

ಮೊಡಂಕಾಪು: ದಶಮಾನೋತ್ಸವ ಪ್ರಯುಕ್ತ ಮೊಡಂಕಾಪಿನಲ್ಲಿ ಕೃಷಿ ಮಾಹಿತಿ ಶಿಬಿರ

ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಮತ್ತು ತೋಟಗಾರಿಕಾ ಇಲಾಖೆ – ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ  ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ ಇದರ  ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಪೈಕಿ  ಸಮಗ್ರ ಕೃಷಿ ಮಾಹಿತಿ ಶಿಬಿರವೂ ಒಂದಾಗಿದ್ದು,  ಇದನ್ನು ೨೮ .೦೯ .೨೦೨೫ ರಂದು ಬೆಳಿಗ್ಗೆ ಇನ್ಫೆಂಟ್ ಜೀಸಸ್ ಚರ್ಚ್  ಸಭಾಂಗಣದಲ್ಲಿ  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.  

ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸದಸ್ಯರಾದ ಶ್ರೀ ರಾಮಕೃಷ್ಣ ಆಳ್ವಾರವರು ಮುಖ್ಯ ಅತಿಥಿಯಾಗಿದ್ಧರು. ಇನ್ಫೆಂಟ್  ಜೀಸಸ್ ಚರ್ಚಿನ ಪ್ರಧಾನ   ಧರ್ಮಗುರುಗಳಾದ ಫಾI ವಿಕ್ಟರ್ ಡಿಸೋಜಾ  ಶಿಬಿರಾರ್ಥಿಗಳನ್ನು  ಉದ್ದೇಶಿಸಿ ಮಾತನಾಡಿ, ಕೃಷಿಕರು ವಾಣಿಜ್ಯ ಬೆಳೆಗಳೊಂದಿಗೆ  ಮಿಶ್ರ ಬೆಳೆ ಹಾಗೂ  ಸಾವಯವ ಕೃಷಿ ಮಾಡಿ ಮಾರುಕಟ್ಟೆ ಗಳಿಸುವುದು ಈಗಿನ ಆದ್ಯತೆಯಾಗಬೇಕಾಗಿದೆ  ಎಂದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ  ಶ್ರೀ ಜೋ ಪ್ರದೀಪ್ ಡಿ’ಸೋಜ,  ಹಿರಿಯ ಸಹಾಯಕ ನಿರ್ದೇಶಕರು,  ತೋಟಗಾರಿಕಾ ಇಲಾಖೆ,  ಬಂಟ್ವಾಳ ಇವರು ಅಡಿಕೆ ಬೆಳೆಯುವ ವಿಧಾನ, ನೀರಾವರಿ , ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗಭಾದೆ ಮತ್ತು ನಿಯಂತ್ರಣ, ಅಡಿಕೆಯೊಂದಿಗೆ ಮಿಶ್ರಕೃಷಿ  ಹಾಗೂ ರೈತರಿಗೆ ಇಲಾಖೆಯಲ್ಲಿ ಲಭ್ಯವಿರುವ ಸೌಲಭ್ಯಗಳು ಮುಂತಾದ  ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.

ನೂರಕ್ಕೂ  ಮಿಕ್ಕಿ ಕೃಷಿಕರು ಮಾಹಿತಿಯನ್ನು ಪಡೆದರು.  ಶಿಬಿರಾರ್ಥಿಗಳಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಸಂಘಟನೆ ವತಿಯಿಂದ ಮಾಡಲಾಗಿತ್ತು. ಈ ವಿಚಾರ ಸಂಕಿರಣದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಘಟಕದ ದಶಮಾನೋತ್ಸವ ಸಮಿತಿಯ ಸಂಚಾಲಕರಾದ ಶ್ರೀ ಸಂದೀಪ್ ಮಿನೆಜಸ್, ಕಾರ್ಯದರ್ಶಿಯಾದ ಶ್ರೀ ಅವಿಲ್ ಲುವಿಸ್, ಕೋಶಾಧಿಕಾರಿಯಾದ ಶ್ರೀ ರಿಚರ್ಡ್ ಪಾಸ್ಕಲ್ ಡಿಸೋಜಾ,ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಐವನ್ ಡಿಸೋಜಾ ಹಾಗೂ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸುನಿಲ್ ವೇಗಸ್ ಉಪಸ್ಥಿತರಿದ್ದರು. ರಾಷ್ಟ್ರ ಗೀತೆಯೊಂದಿಗೆ  ವಿಚಾರ ಸಂಕಿರಣವನ್ನು ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!