ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಮತ್ತು ತೋಟಗಾರಿಕಾ ಇಲಾಖೆ – ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ ಇದರ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಪೈಕಿ ಸಮಗ್ರ ಕೃಷಿ ಮಾಹಿತಿ ಶಿಬಿರವೂ ಒಂದಾಗಿದ್ದು, ಇದನ್ನು ೨೮ .೦೯ .೨೦೨೫ ರಂದು ಬೆಳಿಗ್ಗೆ ಇನ್ಫೆಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸದಸ್ಯರಾದ ಶ್ರೀ ರಾಮಕೃಷ್ಣ ಆಳ್ವಾರವರು ಮುಖ್ಯ ಅತಿಥಿಯಾಗಿದ್ಧರು. ಇನ್ಫೆಂಟ್ ಜೀಸಸ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ಫಾI ವಿಕ್ಟರ್ ಡಿಸೋಜಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕೃಷಿಕರು ವಾಣಿಜ್ಯ ಬೆಳೆಗಳೊಂದಿಗೆ ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡಿ ಮಾರುಕಟ್ಟೆ ಗಳಿಸುವುದು ಈಗಿನ ಆದ್ಯತೆಯಾಗಬೇಕಾಗಿದೆ ಎಂದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ಜೋ ಪ್ರದೀಪ್ ಡಿ’ಸೋಜ, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ, ಬಂಟ್ವಾಳ ಇವರು ಅಡಿಕೆ ಬೆಳೆಯುವ ವಿಧಾನ, ನೀರಾವರಿ , ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗಭಾದೆ ಮತ್ತು ನಿಯಂತ್ರಣ, ಅಡಿಕೆಯೊಂದಿಗೆ ಮಿಶ್ರಕೃಷಿ ಹಾಗೂ ರೈತರಿಗೆ ಇಲಾಖೆಯಲ್ಲಿ ಲಭ್ಯವಿರುವ ಸೌಲಭ್ಯಗಳು ಮುಂತಾದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.
ನೂರಕ್ಕೂ ಮಿಕ್ಕಿ ಕೃಷಿಕರು ಮಾಹಿತಿಯನ್ನು ಪಡೆದರು. ಶಿಬಿರಾರ್ಥಿಗಳಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಸಂಘಟನೆ ವತಿಯಿಂದ ಮಾಡಲಾಗಿತ್ತು. ಈ ವಿಚಾರ ಸಂಕಿರಣದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಘಟಕದ ದಶಮಾನೋತ್ಸವ ಸಮಿತಿಯ ಸಂಚಾಲಕರಾದ ಶ್ರೀ ಸಂದೀಪ್ ಮಿನೆಜಸ್, ಕಾರ್ಯದರ್ಶಿಯಾದ ಶ್ರೀ ಅವಿಲ್ ಲುವಿಸ್, ಕೋಶಾಧಿಕಾರಿಯಾದ ಶ್ರೀ ರಿಚರ್ಡ್ ಪಾಸ್ಕಲ್ ಡಿಸೋಜಾ,ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಐವನ್ ಡಿಸೋಜಾ ಹಾಗೂ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸುನಿಲ್ ವೇಗಸ್ ಉಪಸ್ಥಿತರಿದ್ದರು. ರಾಷ್ಟ್ರ ಗೀತೆಯೊಂದಿಗೆ ವಿಚಾರ ಸಂಕಿರಣವನ್ನು ಮುಕ್ತಾಯಗೊಳಿಸಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…