ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಮತ್ತು ತೋಟಗಾರಿಕಾ ಇಲಾಖೆ – ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ ಇದರ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಪೈಕಿ ಸಮಗ್ರ ಕೃಷಿ ಮಾಹಿತಿ ಶಿಬಿರವೂ ಒಂದಾಗಿದ್ದು, ಇದನ್ನು ೨೮ .೦೯ .೨೦೨೫ ರಂದು ಬೆಳಿಗ್ಗೆ ಇನ್ಫೆಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸದಸ್ಯರಾದ ಶ್ರೀ ರಾಮಕೃಷ್ಣ ಆಳ್ವಾರವರು ಮುಖ್ಯ ಅತಿಥಿಯಾಗಿದ್ಧರು. ಇನ್ಫೆಂಟ್ ಜೀಸಸ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ಫಾI ವಿಕ್ಟರ್ ಡಿಸೋಜಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕೃಷಿಕರು ವಾಣಿಜ್ಯ ಬೆಳೆಗಳೊಂದಿಗೆ ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡಿ ಮಾರುಕಟ್ಟೆ ಗಳಿಸುವುದು ಈಗಿನ ಆದ್ಯತೆಯಾಗಬೇಕಾಗಿದೆ ಎಂದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ಜೋ ಪ್ರದೀಪ್ ಡಿ’ಸೋಜ, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ, ಬಂಟ್ವಾಳ ಇವರು ಅಡಿಕೆ ಬೆಳೆಯುವ ವಿಧಾನ, ನೀರಾವರಿ , ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗಭಾದೆ ಮತ್ತು ನಿಯಂತ್ರಣ, ಅಡಿಕೆಯೊಂದಿಗೆ ಮಿಶ್ರಕೃಷಿ ಹಾಗೂ ರೈತರಿಗೆ ಇಲಾಖೆಯಲ್ಲಿ ಲಭ್ಯವಿರುವ ಸೌಲಭ್ಯಗಳು ಮುಂತಾದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.
ನೂರಕ್ಕೂ ಮಿಕ್ಕಿ ಕೃಷಿಕರು ಮಾಹಿತಿಯನ್ನು ಪಡೆದರು. ಶಿಬಿರಾರ್ಥಿಗಳಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಸಂಘಟನೆ ವತಿಯಿಂದ ಮಾಡಲಾಗಿತ್ತು. ಈ ವಿಚಾರ ಸಂಕಿರಣದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಘಟಕದ ದಶಮಾನೋತ್ಸವ ಸಮಿತಿಯ ಸಂಚಾಲಕರಾದ ಶ್ರೀ ಸಂದೀಪ್ ಮಿನೆಜಸ್, ಕಾರ್ಯದರ್ಶಿಯಾದ ಶ್ರೀ ಅವಿಲ್ ಲುವಿಸ್, ಕೋಶಾಧಿಕಾರಿಯಾದ ಶ್ರೀ ರಿಚರ್ಡ್ ಪಾಸ್ಕಲ್ ಡಿಸೋಜಾ,ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಐವನ್ ಡಿಸೋಜಾ ಹಾಗೂ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸುನಿಲ್ ವೇಗಸ್ ಉಪಸ್ಥಿತರಿದ್ದರು. ರಾಷ್ಟ್ರ ಗೀತೆಯೊಂದಿಗೆ ವಿಚಾರ ಸಂಕಿರಣವನ್ನು ಮುಕ್ತಾಯಗೊಳಿಸಲಾಯಿತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…