ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಮತ್ತು ತೋಟಗಾರಿಕಾ ಇಲಾಖೆ – ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ ಇದರ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಪೈಕಿ ಸಮಗ್ರ ಕೃಷಿ ಮಾಹಿತಿ ಶಿಬಿರವೂ ಒಂದಾಗಿದ್ದು, ಇದನ್ನು ೨೮ .೦೯ .೨೦೨೫ ರಂದು ಬೆಳಿಗ್ಗೆ ಇನ್ಫೆಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸದಸ್ಯರಾದ ಶ್ರೀ ರಾಮಕೃಷ್ಣ ಆಳ್ವಾರವರು ಮುಖ್ಯ ಅತಿಥಿಯಾಗಿದ್ಧರು. ಇನ್ಫೆಂಟ್ ಜೀಸಸ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ಫಾI ವಿಕ್ಟರ್ ಡಿಸೋಜಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕೃಷಿಕರು ವಾಣಿಜ್ಯ ಬೆಳೆಗಳೊಂದಿಗೆ ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡಿ ಮಾರುಕಟ್ಟೆ ಗಳಿಸುವುದು ಈಗಿನ ಆದ್ಯತೆಯಾಗಬೇಕಾಗಿದೆ ಎಂದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ಜೋ ಪ್ರದೀಪ್ ಡಿ’ಸೋಜ, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ, ಬಂಟ್ವಾಳ ಇವರು ಅಡಿಕೆ ಬೆಳೆಯುವ ವಿಧಾನ, ನೀರಾವರಿ , ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗಭಾದೆ ಮತ್ತು ನಿಯಂತ್ರಣ, ಅಡಿಕೆಯೊಂದಿಗೆ ಮಿಶ್ರಕೃಷಿ ಹಾಗೂ ರೈತರಿಗೆ ಇಲಾಖೆಯಲ್ಲಿ ಲಭ್ಯವಿರುವ ಸೌಲಭ್ಯಗಳು ಮುಂತಾದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.
ನೂರಕ್ಕೂ ಮಿಕ್ಕಿ ಕೃಷಿಕರು ಮಾಹಿತಿಯನ್ನು ಪಡೆದರು. ಶಿಬಿರಾರ್ಥಿಗಳಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಸಂಘಟನೆ ವತಿಯಿಂದ ಮಾಡಲಾಗಿತ್ತು. ಈ ವಿಚಾರ ಸಂಕಿರಣದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಘಟಕದ ದಶಮಾನೋತ್ಸವ ಸಮಿತಿಯ ಸಂಚಾಲಕರಾದ ಶ್ರೀ ಸಂದೀಪ್ ಮಿನೆಜಸ್, ಕಾರ್ಯದರ್ಶಿಯಾದ ಶ್ರೀ ಅವಿಲ್ ಲುವಿಸ್, ಕೋಶಾಧಿಕಾರಿಯಾದ ಶ್ರೀ ರಿಚರ್ಡ್ ಪಾಸ್ಕಲ್ ಡಿಸೋಜಾ,ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಐವನ್ ಡಿಸೋಜಾ ಹಾಗೂ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸುನಿಲ್ ವೇಗಸ್ ಉಪಸ್ಥಿತರಿದ್ದರು. ರಾಷ್ಟ್ರ ಗೀತೆಯೊಂದಿಗೆ ವಿಚಾರ ಸಂಕಿರಣವನ್ನು ಮುಕ್ತಾಯಗೊಳಿಸಲಾಯಿತು.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…