ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಮತ್ತು ತೋಟಗಾರಿಕಾ ಇಲಾಖೆ – ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ ಇದರ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಪೈಕಿ ಸಮಗ್ರ ಕೃಷಿ ಮಾಹಿತಿ ಶಿಬಿರವೂ ಒಂದಾಗಿದ್ದು, ಇದನ್ನು ೨೮ .೦೯ .೨೦೨೫ ರಂದು ಬೆಳಿಗ್ಗೆ ಇನ್ಫೆಂಟ್ ಜೀಸಸ್ ಚರ್ಚ್ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸದಸ್ಯರಾದ ಶ್ರೀ ರಾಮಕೃಷ್ಣ ಆಳ್ವಾರವರು ಮುಖ್ಯ ಅತಿಥಿಯಾಗಿದ್ಧರು. ಇನ್ಫೆಂಟ್ ಜೀಸಸ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ಫಾI ವಿಕ್ಟರ್ ಡಿಸೋಜಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕೃಷಿಕರು ವಾಣಿಜ್ಯ ಬೆಳೆಗಳೊಂದಿಗೆ ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡಿ ಮಾರುಕಟ್ಟೆ ಗಳಿಸುವುದು ಈಗಿನ ಆದ್ಯತೆಯಾಗಬೇಕಾಗಿದೆ ಎಂದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ಜೋ ಪ್ರದೀಪ್ ಡಿ’ಸೋಜ, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ, ಬಂಟ್ವಾಳ ಇವರು ಅಡಿಕೆ ಬೆಳೆಯುವ ವಿಧಾನ, ನೀರಾವರಿ , ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗಭಾದೆ ಮತ್ತು ನಿಯಂತ್ರಣ, ಅಡಿಕೆಯೊಂದಿಗೆ ಮಿಶ್ರಕೃಷಿ ಹಾಗೂ ರೈತರಿಗೆ ಇಲಾಖೆಯಲ್ಲಿ ಲಭ್ಯವಿರುವ ಸೌಲಭ್ಯಗಳು ಮುಂತಾದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.
ನೂರಕ್ಕೂ ಮಿಕ್ಕಿ ಕೃಷಿಕರು ಮಾಹಿತಿಯನ್ನು ಪಡೆದರು. ಶಿಬಿರಾರ್ಥಿಗಳಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಸಂಘಟನೆ ವತಿಯಿಂದ ಮಾಡಲಾಗಿತ್ತು. ಈ ವಿಚಾರ ಸಂಕಿರಣದಲ್ಲಿ ಸಂತ ಕ್ರಿಸ್ಟೋಪರ್ ಎಸೋಸಿಯೇಶನ್ (ರಿ) ಬಂಟ್ವಾಳ ಮೊಡಂಕಾಪು ಘಟಕದ ದಶಮಾನೋತ್ಸವ ಸಮಿತಿಯ ಸಂಚಾಲಕರಾದ ಶ್ರೀ ಸಂದೀಪ್ ಮಿನೆಜಸ್, ಕಾರ್ಯದರ್ಶಿಯಾದ ಶ್ರೀ ಅವಿಲ್ ಲುವಿಸ್, ಕೋಶಾಧಿಕಾರಿಯಾದ ಶ್ರೀ ರಿಚರ್ಡ್ ಪಾಸ್ಕಲ್ ಡಿಸೋಜಾ,ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಐವನ್ ಡಿಸೋಜಾ ಹಾಗೂ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಸುನಿಲ್ ವೇಗಸ್ ಉಪಸ್ಥಿತರಿದ್ದರು. ರಾಷ್ಟ್ರ ಗೀತೆಯೊಂದಿಗೆ ವಿಚಾರ ಸಂಕಿರಣವನ್ನು ಮುಕ್ತಾಯಗೊಳಿಸಲಾಯಿತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…