ಕೊಡವೂರು ಸಾಲ್ಮರದ ಮನೆಯಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಬಡಗಬೆಟ್ಟು ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭಾನಾ ಎಂದು ಗುರುತಿಸಲಾಗಿದ್ದು. ಈಕೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದ ಮೊದಲ ಆರೋಪಿ ಫೈಜಲ್ ಖಾನ್ ಪತ್ನಿಯಾಗಿದ್ದಾಳೆ. ಪೊಲೀಸರು ಈಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮಹಮದ್ ಫೈಸಲ್ ಖಾನ್, ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮೊಹಮದ್ ಶರೀಫ್, ಸುರತ್ಕಲ್ ಕೃಷಾಪುರದ ಏಳನೇ ಬ್ಲಾಕ್ ನಿವಾಸಿ ಅಬ್ದುಲ್ ಶುಕೂರು ಯಾನೆ ಅದ್ದು ಅವರನ್ನು ಬಂಧಿಸಿದ್ದಾರೆ. ಇದರಲ್ಲಿ ಶರೀಫ್ ಹಾಗೂ ಅದ್ದು ಎಕೆಎಂಎಸ್ ಬಸ್ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರೆ, ಫೈಸಲ್ ಖಾನ್, ಸೈಫ್ನ ಆತ್ಮೀಯನಾಗಿದ್ದನು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…