ಲಯನ್ಸ್ ಕ್ಲಬ್ ವಿಟ್ಲ, ಇದರ ಆಶ್ರಯದಲ್ಲಿ ಇಂದು ಕಾರ್ಗಿಲ್ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗಿರುವ ನಮ್ಮ ಲಯನ್ ಸದಸ್ಯರಾದ ಲಯನ್ ಬಾಲಕೃಷ್ಣ ಗೌಡ, ಲಯನ್ ಡೇವಿಡ್ ವೇಗಸ್, ಲಯನ್ ಥೋಮಸ್ ಡೇನಿಸ್ ಲೋಬೋ ಇವರನ್ನು ನಮ್ಮ ಲಯನ್ಸ್ ಭವನದಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.
ನಂತರ ನಿವೃತ್ತ ಯೋಧ ಬಾಲಕೃಷ್ಣ ರೈ ಹಾಗೂ ಚೇತನಾ ಶೆಟ್ಟಿ ಇವರ ಮನೆಗೆ ಹೋಗಿ ದಂಪತಿಗಳನ್ನು ಶಾಲು ಹೊದಿಸಿ, ಹಾರ ಹಾಕಿ, ಫಲ-ಪುಷ್ಪ ನೀಡಿ, ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಅಧ್ಯಕ್ಷರಾದ ಲಯನ್ ಜಲಜಾಕ್ಷಿ ಬಾಲಕೃಷ್ಣ ವಹಿಸಿದ್ದರು. ಹಿರಿಯ ಸದಸ್ಯರಾದ ಲಯನ್ ಮಂಗೇಶ್ ಭಟ್ ವಿ. ಹಾಗೂ ಜಿಲ್ಲಾ ಪೂರ್ವ ಗವರ್ನರ್ ಆದ ಲಯನ್ ಡಾ. ಗೀತಪ್ರಕಾಶ್ ಇವರು ಕಾರ್ಗಿಲ್ ನ ಬಗ್ಗೆ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷರಾದ ಲಯನ್ ಸುದೇಶ್ ಭಂಡಾರಿ, ಕಾರ್ಯದರ್ಶಿ ಲಯನ್ ಪುಷ್ಪಲತಾ, ಲಯನ್ ಸಂತೋಷ್ ಕುಮಾರ್ ಶೆಟ್ಟಿ, ಅರವಿಂದ ರೈ, ಮೌರ್ಯ ಶೆಟ್ಟಿ, ಲಿಯೋ ಅನಘ ಉಪಸ್ಥಿತರಿದ್ದರು. ಕೋಶಾಧಿಕಾರಿ ಲಯನ್ ಮುರಳಿ ಪ್ರಸಾದ್ ವಂದನಾರ್ಪಣೆ ಗೈದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…