ಜನ ಮನದ ನಾಡಿ ಮಿಡಿತ

Advertisement

ಕ್ಷುಲ್ಲಕ ನೆಪವೊಡ್ಡಿ ರಾಜಕೀಯ ಪ್ರೇರಿತ ಪ್ರಕರಣ ದಾಖಲಾತಿ ಅಧಿಕಾರಿಗಳ ನಡೆ ಖಂಡನಿಯ :ಹರೀಶ್ ಆಚಾರ್ಯ

ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾಗಿರುವ ಪ್ರಭಾಕರ ಪ್ರಭುರವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಜ್ಞಾಪನ ಪತ್ರ ಮೂಲಕ ಒತ್ತಡ ಹೇರದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವ ಅಧಿಕಾರಿಗಳ ನಡೆಯನ್ನು ಬಂಟ್ವಾಳ ತಾಲೂಕು ರಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಆಚಾರ್ಯ ರಾಯಿ ತೀವ್ರವಾಗಿ ಖಂಡಿಸಿದ್ದಾರೆ.

ಇದೊಂದು ರಾಜಕೀಯ ಪ್ರೇರಿತವಾಗಿದ್ದು ಮೇಲಾಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪ್ರಕರಣ ದಾಖಲು ಮಾಡಿರುವ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡಿದೆ. ಪ್ರಭಾಕರ ಪ್ರಭು ರವರು ಬರೆದಿರುವ ಲೇಟರ್ ಹೆಡ್ ಪತ್ರದಲ್ಲಿ ಮಾಜಿ ಸದಸ್ಯರು ಎಂದೂ ನಮೂದು ಮಾಡಿರುವುದರಿಂದ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿಚಾರದ ಬಗ್ಗೆ ಪತ್ರದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಆದೇಶ ಮತ್ತು ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಯವರ ಪತ್ರಿಕಾ ಪ್ರಕಟಣೆಯಂತೆ ಇರುವ ವಿಷಯ ಕುರಿತು ಯಾರಿಗೂ ಒತ್ತಡ ಹೇರದಂತೆ ಜಿಲ್ಲಾ ಮಟ್ಟದ ಅಧಿಕಾರಿಯವರಿಗೆ ಪತ್ರ ಬರೆದಿದ್ದಾರೆಯೇ ಹೊರತು ಲೇಟರ್ ಹೆಡ್ ಮೂಲಕ ತಾಲೂಕು ಪಂಚಾಯತ್ ಇಲಾಖೆಯನ್ನು ದುರುಪಯೋಗ ಪಡಿಸಿರುವುದಿಲ್ಲ. ಮೇಲಾಧಿಕಾರಿಗಳು ದಿನಕ್ಕೆ 100 ರಂತೆ ಸಮೀಕ್ಷೆ ಮಾಡಬೇಕು ಎಂದೂ ಪ್ರತಿ ಪಂಚಾಯತ್‌ನ ಸಿಬ್ಬಂದಿಗಳಿಗೆ ಗುರಿ ನಿಗದಿ ಪಡಿಸಿರುವುದು ಪರೋಕ್ಷವಾಗಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಭಾಗವಹಿಸಲೇ ಬೇಕು ಅಂತಾ ಬಾಸವಗುತ್ತಿದೆ. ಜಿಲ್ಲೆಯಲ್ಲಿ ಅದೆಷ್ಟೋ ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಅವರು ಪ್ರತಿನಿದಿಸಿರುವ ಕರ್ನಾಟಕ ಸರಕಾರ, ಇನ್ನಿತರ ಸ್ಥಳೀಯ ಸಂಸ್ಥೆಗಳ ಹೆಸರಿನಲ್ಲಿ ಲೇಟರ್ ಹೆಡ್ ಗಳು ಕಾರ್ಯಾಚರಣೆ ಆಗುತ್ತಿರುವುದನ್ನು ನಾವೆಲ್ಲರೂ ಕಂಡಿದ್ದೇವೆ. ಕೇವಲ ಸಮೀಕ್ಷೆಗೆ ಒತ್ತಡ ಹೇರದಂತೆ ಬರೆದಿರುವ ಪತ್ರಕ್ಕೆ ಕ್ರಮ ಕೈಗೊಳ್ಳಲು ಸಾಧ್ಯ ವಾಗದ ಕಾರಣ ಲೇಟರ್ ಹೆಡ್ ನಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಎಂಬುದುದಾಗಿ ನಮೂದು ಮಾಡಿರುವುದರ ನೆಪದಲ್ಲಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವುದು ರಾಜಕೀಯ ದುರುದ್ದೇಶದ ಕ್ರತ್ಯ ವಾಗಿದೆ ಎಂದು ಹರೀಶ್ ಆಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!