ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾಗಿರುವ ಪ್ರಭಾಕರ ಪ್ರಭುರವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಜ್ಞಾಪನ ಪತ್ರ ಮೂಲಕ ಒತ್ತಡ ಹೇರದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಮನವಿ ಮಾಡಿರುವುದರ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವ ಅಧಿಕಾರಿಗಳ ನಡೆಯನ್ನು ಬಂಟ್ವಾಳ ತಾಲೂಕು ರಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಆಚಾರ್ಯ ರಾಯಿ ತೀವ್ರವಾಗಿ ಖಂಡಿಸಿದ್ದಾರೆ.
ಇದೊಂದು ರಾಜಕೀಯ ಪ್ರೇರಿತವಾಗಿದ್ದು ಮೇಲಾಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪ್ರಕರಣ ದಾಖಲು ಮಾಡಿರುವ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡಿದೆ. ಪ್ರಭಾಕರ ಪ್ರಭು ರವರು ಬರೆದಿರುವ ಲೇಟರ್ ಹೆಡ್ ಪತ್ರದಲ್ಲಿ ಮಾಜಿ ಸದಸ್ಯರು ಎಂದೂ ನಮೂದು ಮಾಡಿರುವುದರಿಂದ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಿಚಾರದ ಬಗ್ಗೆ ಪತ್ರದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಆದೇಶ ಮತ್ತು ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಯವರ ಪತ್ರಿಕಾ ಪ್ರಕಟಣೆಯಂತೆ ಇರುವ ವಿಷಯ ಕುರಿತು ಯಾರಿಗೂ ಒತ್ತಡ ಹೇರದಂತೆ ಜಿಲ್ಲಾ ಮಟ್ಟದ ಅಧಿಕಾರಿಯವರಿಗೆ ಪತ್ರ ಬರೆದಿದ್ದಾರೆಯೇ ಹೊರತು ಲೇಟರ್ ಹೆಡ್ ಮೂಲಕ ತಾಲೂಕು ಪಂಚಾಯತ್ ಇಲಾಖೆಯನ್ನು ದುರುಪಯೋಗ ಪಡಿಸಿರುವುದಿಲ್ಲ. ಮೇಲಾಧಿಕಾರಿಗಳು ದಿನಕ್ಕೆ 100 ರಂತೆ ಸಮೀಕ್ಷೆ ಮಾಡಬೇಕು ಎಂದೂ ಪ್ರತಿ ಪಂಚಾಯತ್ನ ಸಿಬ್ಬಂದಿಗಳಿಗೆ ಗುರಿ ನಿಗದಿ ಪಡಿಸಿರುವುದು ಪರೋಕ್ಷವಾಗಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಭಾಗವಹಿಸಲೇ ಬೇಕು ಅಂತಾ ಬಾಸವಗುತ್ತಿದೆ. ಜಿಲ್ಲೆಯಲ್ಲಿ ಅದೆಷ್ಟೋ ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಅವರು ಪ್ರತಿನಿದಿಸಿರುವ ಕರ್ನಾಟಕ ಸರಕಾರ, ಇನ್ನಿತರ ಸ್ಥಳೀಯ ಸಂಸ್ಥೆಗಳ ಹೆಸರಿನಲ್ಲಿ ಲೇಟರ್ ಹೆಡ್ ಗಳು ಕಾರ್ಯಾಚರಣೆ ಆಗುತ್ತಿರುವುದನ್ನು ನಾವೆಲ್ಲರೂ ಕಂಡಿದ್ದೇವೆ. ಕೇವಲ ಸಮೀಕ್ಷೆಗೆ ಒತ್ತಡ ಹೇರದಂತೆ ಬರೆದಿರುವ ಪತ್ರಕ್ಕೆ ಕ್ರಮ ಕೈಗೊಳ್ಳಲು ಸಾಧ್ಯ ವಾಗದ ಕಾರಣ ಲೇಟರ್ ಹೆಡ್ ನಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಎಂಬುದುದಾಗಿ ನಮೂದು ಮಾಡಿರುವುದರ ನೆಪದಲ್ಲಿ ಪೊಲೀಸ್ ದೂರು ನೀಡಿ ಪ್ರಕರಣ ದಾಖಲಿಸಿರುವುದು ರಾಜಕೀಯ ದುರುದ್ದೇಶದ ಕ್ರತ್ಯ ವಾಗಿದೆ ಎಂದು ಹರೀಶ್ ಆಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…