ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ ಹಾಗೂ ಗ್ರಾ.ಪಂ ವಠಾರದಲ್ಲಿ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತಿಗೆ ದಿಢೀರ್ ಗ್ರಾ.ಪಂಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಹಾಗೂ ಮಾಜಿ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ನೇತೃತ್ವದಲ್ಲಿ ಗ್ರಾ.ಪಂಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಿಡಿಓ ಮನ್ಮಥ ಅಜಿರಂಗಳ ಜೊತೆ ಹಾಗೂ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್ಎಸ್ಡಿ ಜೊತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾ.ಪಂ ವಠಾರದಲ್ಲೇ ಕಸದ ರಾಶಿ ತುಂಬಿದ್ದರೂ ಗ್ರಾ.ಪಂನಿಂದ ಬೇರೆಡೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು ಇದನ್ನು ನೋಡುವಾಗ ನಾಚಿಕೆಯಾಗುತ್ತಿದೆ ಎಂದು ಸುಪ್ರೀತ್ ಕಣ್ಣಾರಾಯ ಹೇಳಿದ್ದಾರೆ. ಪ್ರವೀಣ್ ಆಚಾರ್ಯ ನರಿಮೊಗರು ಮಾತನಾಡಿ ಗ್ರಾ.ಪಂ ವಠಾರದಲ್ಲಿ ಕಸದ ರಾಶಿ ತುಂಬಿದೆ, ಶೌಚಾಲಯದ ಅವಸ್ಥೆ ಹೇಳತೀರದಾಗಿದೆ, ಗ್ರಾ.ಪಂ ಅಂಗಳದಲ್ಲಿ ಪಾಚಿ ಹಿಡಿದು ಇತ್ತೀಚೆಗೆ ಮಹಿಳೆಯೊಬ್ಬರು ಬಿದ್ದು ಕಾಲು ಮುರಿತಕ್ಕೊಳಗಾಗಿದ್ದರೂ ಕೂಡಾ ಅದಕ್ಕೆ ಬೀಚಿಂಗ್ ಪೌಡರ್ ಹಾಕಲು ಪಂಚಾಯತ್ನಿಂದ ಸಾಧ್ಯವಾಗಿಲ್ಲ, ಇದೆಲ್ಲವೂ ಗ್ರಾ.ಪಂ ನಿರ್ಲಕ್ಷ್ಯ ಮತ್ತು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದ್ರು. ಇನ್ನೂ ಈ ಸಂದರ್ಭದಲ್ಲಿ ಕಮಲೇಶ್ ಎಸ್.ವಿ, ಸುಪ್ರೀತ್ ಕಣ್ಣಾರಾಯ, ಪ್ರವೀಣ್ ಆಚಾರ್ಯ, ಜಯಾನಂದ ಆಳ್ವ ಪಟ್ಟೆ, ಮಹಮ್ಮದ್ ಮುಂಡೂರು, ನೀಲಪ್ಪ ನಾಯ್ಕ ಅಂಬಟ ಉಪಸ್ಥಿತರಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…