ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ ಹಾಗೂ ಗ್ರಾ.ಪಂ ವಠಾರದಲ್ಲಿ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತಿಗೆ ದಿಢೀರ್ ಗ್ರಾ.ಪಂಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಹಾಗೂ ಮಾಜಿ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ನೇತೃತ್ವದಲ್ಲಿ ಗ್ರಾ.ಪಂಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಿಡಿಓ ಮನ್ಮಥ ಅಜಿರಂಗಳ ಜೊತೆ ಹಾಗೂ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್ಎಸ್ಡಿ ಜೊತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾ.ಪಂ ವಠಾರದಲ್ಲೇ ಕಸದ ರಾಶಿ ತುಂಬಿದ್ದರೂ ಗ್ರಾ.ಪಂನಿಂದ ಬೇರೆಡೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು ಇದನ್ನು ನೋಡುವಾಗ ನಾಚಿಕೆಯಾಗುತ್ತಿದೆ ಎಂದು ಸುಪ್ರೀತ್ ಕಣ್ಣಾರಾಯ ಹೇಳಿದ್ದಾರೆ. ಪ್ರವೀಣ್ ಆಚಾರ್ಯ ನರಿಮೊಗರು ಮಾತನಾಡಿ ಗ್ರಾ.ಪಂ ವಠಾರದಲ್ಲಿ ಕಸದ ರಾಶಿ ತುಂಬಿದೆ, ಶೌಚಾಲಯದ ಅವಸ್ಥೆ ಹೇಳತೀರದಾಗಿದೆ, ಗ್ರಾ.ಪಂ ಅಂಗಳದಲ್ಲಿ ಪಾಚಿ ಹಿಡಿದು ಇತ್ತೀಚೆಗೆ ಮಹಿಳೆಯೊಬ್ಬರು ಬಿದ್ದು ಕಾಲು ಮುರಿತಕ್ಕೊಳಗಾಗಿದ್ದರೂ ಕೂಡಾ ಅದಕ್ಕೆ ಬೀಚಿಂಗ್ ಪೌಡರ್ ಹಾಕಲು ಪಂಚಾಯತ್ನಿಂದ ಸಾಧ್ಯವಾಗಿಲ್ಲ, ಇದೆಲ್ಲವೂ ಗ್ರಾ.ಪಂ ನಿರ್ಲಕ್ಷ್ಯ ಮತ್ತು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದ್ರು. ಇನ್ನೂ ಈ ಸಂದರ್ಭದಲ್ಲಿ ಕಮಲೇಶ್ ಎಸ್.ವಿ, ಸುಪ್ರೀತ್ ಕಣ್ಣಾರಾಯ, ಪ್ರವೀಣ್ ಆಚಾರ್ಯ, ಜಯಾನಂದ ಆಳ್ವ ಪಟ್ಟೆ, ಮಹಮ್ಮದ್ ಮುಂಡೂರು, ನೀಲಪ್ಪ ನಾಯ್ಕ ಅಂಬಟ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…