ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಕೊಳತ್ತಮಜಲು ಅಬ್ದುಲ್ ರಹ್ಮಾನ್ರನ್ನು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪುದು ಗ್ರಾಮದ ಭರತ್ ರಾಜ್ ಯಾನೆ ಭರತ್ ಎಂಬಾತ ತಲೆ ಮರೆಸಿಕೊಂಡಿದ್ದು, ಆತನ ಬಂಧನವಾಗಲು ಬಾಕಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆಯತ್ನ, ಪ್ರಚೋದನಕಾರಿ ಭಾಷಣಗಳು ಸಹಿತ ಕಾನೂನು ಬಾಹಿರ ಚಟುವಟಿಕೆಗಳಲಿಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…