ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಪತ್ತೆ…!

ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.

ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಇದು ಗಂಡಸಿನ ದೇಹದ ಅವಶೇಷಗಳಂತೆ ಕಾಣುತ್ತದೆ. ಮರದ ಗೆಲ್ಲಿನಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು ಗೆಲ್ಲಲ್ಲಿ ಕೇಸರಿ ಶಾಲು ಜೋತು ಬಿದಿದ್ದು ಬರ್ಮುಡಾದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆಯೆಂದು ಹೇಳಲಾಗಿದೆ.

ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ಸೋಕೊ ತಂಡವು ಭೇಟಿ ನೀಡಿದ್ದು ಬುರುಡೆ, ಎಲುಬುಗಳು ಮತ್ತು ಇತರ ಅವಶೇಷಗಳನ್ನ ಸಂಸ್ಕರಿಸಿ ಪರಿಶೀಲನೆಗೆ ಕಳುಹಿಸಿದೆ. ದೇಹವು ಸಂಪೂರ್ಣ ಕೊಳೆತು ಹೋಗಿದ್ದು ಎಲುಬು ಬುರುಡೆಯ ಅವಶೇಷಗಳು ಮಾತ್ರ ಉಳಿದಿದ್ದು ಅನೇಕ ತಿಂಗಳ ಹಿಂದೆ ಘಟನೆ ನಡೆದಿರುವ ಸಾಧ್ಯತೆಯಿದೆ. ಅಕ್ಷಯ ಫಾರ್ಮ್ ಸುತ್ತಲೂ ಆವರಣ ಗೋಡೆಯಿದ್ದು ಇದರೊಳಗೆ ಘಟನೆ ಹೇಗೆ ನಡೆಯಿತೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!