ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಇದು ಗಂಡಸಿನ ದೇಹದ ಅವಶೇಷಗಳಂತೆ ಕಾಣುತ್ತದೆ. ಮರದ ಗೆಲ್ಲಿನಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು ಗೆಲ್ಲಲ್ಲಿ ಕೇಸರಿ ಶಾಲು ಜೋತು ಬಿದಿದ್ದು ಬರ್ಮುಡಾದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆಯೆಂದು ಹೇಳಲಾಗಿದೆ.
ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ಸೋಕೊ ತಂಡವು ಭೇಟಿ ನೀಡಿದ್ದು ಬುರುಡೆ, ಎಲುಬುಗಳು ಮತ್ತು ಇತರ ಅವಶೇಷಗಳನ್ನ ಸಂಸ್ಕರಿಸಿ ಪರಿಶೀಲನೆಗೆ ಕಳುಹಿಸಿದೆ. ದೇಹವು ಸಂಪೂರ್ಣ ಕೊಳೆತು ಹೋಗಿದ್ದು ಎಲುಬು ಬುರುಡೆಯ ಅವಶೇಷಗಳು ಮಾತ್ರ ಉಳಿದಿದ್ದು ಅನೇಕ ತಿಂಗಳ ಹಿಂದೆ ಘಟನೆ ನಡೆದಿರುವ ಸಾಧ್ಯತೆಯಿದೆ. ಅಕ್ಷಯ ಫಾರ್ಮ್ ಸುತ್ತಲೂ ಆವರಣ ಗೋಡೆಯಿದ್ದು ಇದರೊಳಗೆ ಘಟನೆ ಹೇಗೆ ನಡೆಯಿತೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…