ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಕರ್ತವ್ಯಕ್ಕೆ ಗೈರು ಹಾಜರು: ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ನೇಮಕಾತಿ ರದ್ದು…!

ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಎಂದು ಸರಕಾರ ಆದೇಶ ಹೊರಡಿಸಿದೆ.

ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಮತ್ತು ಪರ್ಯಾಯ ವ್ಯವಸ್ಥೆ ಮಾಡದೆ ನ್ಯಾಯಾಲಯದ ಕಲಾಪದಂದು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಜೊತೆಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ಇವರ ವಿರುದ್ದ ಜಾತಿ ನಿಂದನೆ ಪ್ರಕರಣವು ದಾಖಲಾಗಿದೆ. ವೈ.ಟಿ ರಾಘವೇಂದ್ರ ಅವರು ವಿಶೇಷ ಸರಕಾರಿ ಅಭಿಯೋಜಕರಾಗಿದ್ದು, ಇತರ ಯಾವುದೇ ನ್ಯಾಯಾಲಯ ಅಥವಾ ಬೇರೆ ಯಾವುದೇ ಪ್ರಕರಣಗಳಲ್ಲಿ ಕಕ್ಷಿಗಾರರ ಪರವಾಗಿ ಪ್ರತಿನಿಧಿಸುವಂತಿಲ್ಲ ಎಂದು ನಿರ್ಬಂಧ ಇದ್ದರೂ ಅವರು ಇತರ ನ್ಯಾಯಾಲಯಗಳಲ್ಲಿ ಹಾಗೂ ಇತರ ಪ್ರಕರಣಗಳಲ್ಲಿ ಕಕ್ಷಿಗಾರರನ್ನು ಪ್ರತಿನಿಧಿಸುತ್ತಿದ್ದಾರೆಂದು ಮಧು ಎಂಬವರು ದಾಖಲೆ ಸಹಿತ ಸರಕಾರಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲಾ ಆರೋಪಗಳಿಗೆ ವೈ.ಟಿ. ರಾಘವೇಂದ್ರ ಅವರು ನೀಡಿದ ಉತ್ತರಗಳು ಸಮಂಜಸವಲ್ಲ ಎಂದು ತೀರ್ಮಾನಿಸಿ, ಕರ್ತವ್ಯ ಲೋಪದಡಿ ಅವರ ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಹುದ್ದೆಯ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!