ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಎಂದು ಸರಕಾರ ಆದೇಶ ಹೊರಡಿಸಿದೆ.
ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಮತ್ತು ಪರ್ಯಾಯ ವ್ಯವಸ್ಥೆ ಮಾಡದೆ ನ್ಯಾಯಾಲಯದ ಕಲಾಪದಂದು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಜೊತೆಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ಇವರ ವಿರುದ್ದ ಜಾತಿ ನಿಂದನೆ ಪ್ರಕರಣವು ದಾಖಲಾಗಿದೆ. ವೈ.ಟಿ ರಾಘವೇಂದ್ರ ಅವರು ವಿಶೇಷ ಸರಕಾರಿ ಅಭಿಯೋಜಕರಾಗಿದ್ದು, ಇತರ ಯಾವುದೇ ನ್ಯಾಯಾಲಯ ಅಥವಾ ಬೇರೆ ಯಾವುದೇ ಪ್ರಕರಣಗಳಲ್ಲಿ ಕಕ್ಷಿಗಾರರ ಪರವಾಗಿ ಪ್ರತಿನಿಧಿಸುವಂತಿಲ್ಲ ಎಂದು ನಿರ್ಬಂಧ ಇದ್ದರೂ ಅವರು ಇತರ ನ್ಯಾಯಾಲಯಗಳಲ್ಲಿ ಹಾಗೂ ಇತರ ಪ್ರಕರಣಗಳಲ್ಲಿ ಕಕ್ಷಿಗಾರರನ್ನು ಪ್ರತಿನಿಧಿಸುತ್ತಿದ್ದಾರೆಂದು ಮಧು ಎಂಬವರು ದಾಖಲೆ ಸಹಿತ ಸರಕಾರಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲಾ ಆರೋಪಗಳಿಗೆ ವೈ.ಟಿ. ರಾಘವೇಂದ್ರ ಅವರು ನೀಡಿದ ಉತ್ತರಗಳು ಸಮಂಜಸವಲ್ಲ ಎಂದು ತೀರ್ಮಾನಿಸಿ, ಕರ್ತವ್ಯ ಲೋಪದಡಿ ಅವರ ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಹುದ್ದೆಯ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…