ಜಿಲ್ಲಾ ಪೋಕ್ಸೊ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿದ್ದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರನ್ನು ಕರ್ತವ್ಯ ಲೋಪದ ಆರೋಪದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಹುದ್ದೆಯ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಎಂದು ಸರಕಾರ ಆದೇಶ ಹೊರಡಿಸಿದೆ.
ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಇವರು ನ್ಯಾಯಾಲಯಕ್ಕೆ ಮಾಹಿತಿ ನೀಡದೇ ಮತ್ತು ಪರ್ಯಾಯ ವ್ಯವಸ್ಥೆ ಮಾಡದೆ ನ್ಯಾಯಾಲಯದ ಕಲಾಪದಂದು ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಜೊತೆಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ಇವರ ವಿರುದ್ದ ಜಾತಿ ನಿಂದನೆ ಪ್ರಕರಣವು ದಾಖಲಾಗಿದೆ. ವೈ.ಟಿ ರಾಘವೇಂದ್ರ ಅವರು ವಿಶೇಷ ಸರಕಾರಿ ಅಭಿಯೋಜಕರಾಗಿದ್ದು, ಇತರ ಯಾವುದೇ ನ್ಯಾಯಾಲಯ ಅಥವಾ ಬೇರೆ ಯಾವುದೇ ಪ್ರಕರಣಗಳಲ್ಲಿ ಕಕ್ಷಿಗಾರರ ಪರವಾಗಿ ಪ್ರತಿನಿಧಿಸುವಂತಿಲ್ಲ ಎಂದು ನಿರ್ಬಂಧ ಇದ್ದರೂ ಅವರು ಇತರ ನ್ಯಾಯಾಲಯಗಳಲ್ಲಿ ಹಾಗೂ ಇತರ ಪ್ರಕರಣಗಳಲ್ಲಿ ಕಕ್ಷಿಗಾರರನ್ನು ಪ್ರತಿನಿಧಿಸುತ್ತಿದ್ದಾರೆಂದು ಮಧು ಎಂಬವರು ದಾಖಲೆ ಸಹಿತ ಸರಕಾರಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲಾ ಆರೋಪಗಳಿಗೆ ವೈ.ಟಿ. ರಾಘವೇಂದ್ರ ಅವರು ನೀಡಿದ ಉತ್ತರಗಳು ಸಮಂಜಸವಲ್ಲ ಎಂದು ತೀರ್ಮಾನಿಸಿ, ಕರ್ತವ್ಯ ಲೋಪದಡಿ ಅವರ ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಹುದ್ದೆಯ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…