ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡು ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಗೂ ರೈಲ್ವೆ ಮೇಲ್ಸೇತುವೆಯ ಭಾಗದಲ್ಲಿ ಮಳೆಗಾಳದ ಆರಂಭದ ದಿನಗಳಲ್ಲಿ ಬಿದ್ದಿದ್ದ ಬೃಹತ್ ಹೊಂಡಗಳನ್ನು ಇಂದು ಹೆದ್ದಾರಿ ಇಲಾಖೆಯ ಮೊಗರೋಡಿ ಕನ್ಸ್ಂಕ್ಸ್ನ್ ಅಧಿಕೃತ ಗುತ್ತಿಗೆ ಸಂಸ್ಥೆಯಿಂದ ಮುಚ್ಚಲಾಗಿದೆ.
ಮಂಗಳೂರಿನಿಂದ ಬಿಸಿರೋಡು ವರೆಗೆ ಹೆದ್ದಾರಿಯ ನಿರ್ವಹಣೆ ವಹಿಸಿಕೊಂಡ ಮೊಗರೊಡಿ ಕಂಪೆನಿಯವರು ಎರಡು ದಿನಗಳಿಂದ ರಸ್ತೆಯ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಕೈಗೊಂಡಿದ್ದಾರೆ. ಬಿಸಿರೋಡು ಬಸ್ ನಿಲ್ದಾಣ ಹಾಗೂ ರೈಲ್ವೇ ಮೇಲ್ಸೇತುವೆಯಲ್ಲಿ ಬಿದ್ದ ಗುಂಡಿಗಳಿಂದ ನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು.
ಈ ಬಾರಿ ಸುರಿದ ಬಾರೀ ಮಳೆಯಿಂದ ಹೆದ್ದಾರಿಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ಬಿದ್ದು ವಾಹನಗಳ ಸಂಚಾರಕ್ಕೆ ತೊಡಕಾಗುತ್ತಿತ್ತು. ಇದೀಗ ಮಳೆ ಕೊಂಚ ಕಡಿಮೆಯಾದ ಕೂಡಲೇ ರಸ್ತೆಯಲ್ಲಿರುವ ಗುಂಡಿಗಳಿಗೆ ಡಾಮರು ಹಾಕಿ ತಾತ್ಕಾಲಿಕವಾಗಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…