ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡು ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಗೂ ರೈಲ್ವೆ ಮೇಲ್ಸೇತುವೆಯ ಭಾಗದಲ್ಲಿ ಮಳೆಗಾಳದ ಆರಂಭದ ದಿನಗಳಲ್ಲಿ ಬಿದ್ದಿದ್ದ ಬೃಹತ್ ಹೊಂಡಗಳನ್ನು ಇಂದು ಹೆದ್ದಾರಿ ಇಲಾಖೆಯ ಮೊಗರೋಡಿ ಕನ್ಸ್ಂಕ್ಸ್ನ್ ಅಧಿಕೃತ ಗುತ್ತಿಗೆ ಸಂಸ್ಥೆಯಿಂದ ಮುಚ್ಚಲಾಗಿದೆ.
ಮಂಗಳೂರಿನಿಂದ ಬಿಸಿರೋಡು ವರೆಗೆ ಹೆದ್ದಾರಿಯ ನಿರ್ವಹಣೆ ವಹಿಸಿಕೊಂಡ ಮೊಗರೊಡಿ ಕಂಪೆನಿಯವರು ಎರಡು ದಿನಗಳಿಂದ ರಸ್ತೆಯ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಕೈಗೊಂಡಿದ್ದಾರೆ. ಬಿಸಿರೋಡು ಬಸ್ ನಿಲ್ದಾಣ ಹಾಗೂ ರೈಲ್ವೇ ಮೇಲ್ಸೇತುವೆಯಲ್ಲಿ ಬಿದ್ದ ಗುಂಡಿಗಳಿಂದ ನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು.
ಈ ಬಾರಿ ಸುರಿದ ಬಾರೀ ಮಳೆಯಿಂದ ಹೆದ್ದಾರಿಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ಬಿದ್ದು ವಾಹನಗಳ ಸಂಚಾರಕ್ಕೆ ತೊಡಕಾಗುತ್ತಿತ್ತು. ಇದೀಗ ಮಳೆ ಕೊಂಚ ಕಡಿಮೆಯಾದ ಕೂಡಲೇ ರಸ್ತೆಯಲ್ಲಿರುವ ಗುಂಡಿಗಳಿಗೆ ಡಾಮರು ಹಾಕಿ ತಾತ್ಕಾಲಿಕವಾಗಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…