ಮುಂಬೈಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವಿಗೀಡಾಗಿದ್ದಾರೆ.
ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಕಿನ್ನಿಗೋಳಿ ಮೂಲದ ಸದ್ಯ ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ 22 ವರ್ಷದ ಸಂಸ್ಕೃತಿ ಅಮೀನ್ ಎಂದು ಗುರುತಿಸಲಾಗಿದೆ. ಸಂಸ್ಕೃತಿ ಅಮೀನ್ ಮುಂಬೈನ ಕೋಟ್ಯಾನ್ ಕ್ಯಾಟರರ್ಸ್ನ ಮಾಲೀಕರಾದ ಅನಿಲ್ ಮತ್ತು ಪದ್ಮಾವತಿ ಅಮೀನ್ ಅವರ ಏಕೈಕ ಪುತ್ರಿ. ಸಂಸ್ಕೃತಿ ಎಂದಿನಂತೆ ಬೆಳಿಗ್ಗೆ 9.30 ರ ಸುಮಾರಿಗೆ ಕೆಲಸಕ್ಕೆ ಹೋಗಲು ಮನೆಯಿಂದ ಹೊರಟಿದ್ದರು. ಅವರು ತಮ್ಮ ನಿವಾಸದಿಂದ ಕೆಲವೇ ಮೀಟರ್ ದೂರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹತ್ತಿರದ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಅವರ ತಲೆಯ ಮೇಲೆ ಬಿದ್ದಿದೆ. ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಅವರ ತಂದೆ ಅನಿಲ್ ಅಮೀನ್ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಾರೆ. ಕಟ್ಟಡದ ನಿರ್ಮಾಣದ ವೇಳೆ ಯಾವುದೇ ಸುರಕ್ಷತೆಯನ್ನು ಅವರು ಮಾಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…