ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಅನೇಕರು ಶಿಕ್ಷಣದಲ್ಲಿ ಮುಂದೆ ಇದ್ದರೂ ಮದುವೆಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ ಅನೇಕ ಹೆಣ್ಣು ಮಕ್ಕಳನ್ನು ನಾವು ಕಾಣಬಹುದಾಗಿದೆ.
ಹೀಗಿರವಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದ ಹೆಣ್ಣು ಮಗಳೊಬ್ಬಳು ಶಿಕ್ಷಣ ಪಡೆಯಲು ನಡೆದು ಬಂದ ದಾರಿಯು ಆಶ್ಚರ್ಯಕರವಾಗಿದೆ. ತನ್ನ ಬಾಲ್ಯದಲ್ಲೇ ತನಗೆ ಬುದ್ಧಿ ಶಕ್ತಿ ಬರುವ ಮೊದಲೇ ತಂದೆಯನ್ನು ಕಳೆದುಕೊಂಡಿರುವ ಈಕೆಯ ಹೆಸರು ಸಫಿಯ ತಂದೆ ಧಾರ್ಮಿಕ ಕ್ಷೇತ್ರದಲ್ಲಿ ಗುರುಗಳಾಗಿದ್ದು, ತನ್ನ ಅಣ್ಣ ತಂದೆಯ ಆದರ್ಶದಂತೆ ಧಾರ್ಮಿಕ ಕ್ಷೇತ್ರದಲ್ಲಿ ತೊಡೆದುಕೊಂಡಿದ್ದಾರೆ. ಕಷ್ಟದ ಸಮಯದಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿದ ಸಂದರ್ಭದಲ್ಲಿ ಉತ್ತಮ ಸಂಬಂಧವನ್ನು ಮನೆಗೆ ಹುಡುಕಿಕೊಂಡು ಬಂದಾಗ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮನೆಯವರ ಆಶಯದಂತೆ ನೌಫಲ್ ಎಂಬುವರ ಜೊತೆ ವಿವಾಹವಾಗುತ್ತಾರೆ. ನಂತರ ಒಂದು ಮಗುವಿಗೆ ಜನ್ಮ ನೀಡಿ ಸುಖ ಸಂಸಾರದಲ್ಲಿ ಇರುವಾಗ ಸಫಿಯ ಎಂಬ ಹೆಣ್ಣುಮಗಳು ತನ್ನ ಗಂಡ ಹಾಗೂ ಮನೆಯವರಲ್ಲಿ ತನ್ನ ಕಲಿಕೆಯ ಕನಸನ್ನ ಹೇಳುತ್ತಾಳೆ. ಇದಕ್ಕೆ ಗಂಡನಾದ ನೌಫಲ್ ಹಾಗೂ ಅವರ ಕುಟುಂಬದವರು ಸಕಾರಾತ್ಮಕವಾಗಿ ಸ್ಪಂದಿಸಿ ತನ್ನ ಬಾಲ್ಯದ ಕನಸು ಉತ್ತಮ ವಕೀಲೆಯಾಗಬೇಕೆಂಬ ಕನಸಿಗೆ ಚಿಗುರು ಮೂಡುತ್ತದೆ ತನ್ನ ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ತನ್ನ 1 ವರ್ಷ 2 ತಿಂಗಳು ಮಗುವಿನ ಜೊತೆಗೆ ವಿವೇಕಾನಂದ ಕಾನೂನು ಕಾಲೇಜು ಪುತ್ತೂರಿನಲ್ಲಿ ಐದು ವರ್ಷದ ಕಾನೂನು ಪದವಿ ಶಿಕ್ಷಣ ಪಡೆಯಲು ಪ್ರವೇಶ ಪಡೆದು ಪ್ರಸ್ತುತ ಐದನೇ ವರ್ಷ ಪೂರ್ಣಗೊಳಿಸಿ ಕಾನೂನು ಪದವಿ ಪಡೆದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೊಂದಣಿಯಾಗಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದ್ದಾರೆ. ಹೀಗೆಯೇ ಹಲವಾರು ಹೆಣ್ಣು ಮಕ್ಕಳು ಮದುವೆಯ ನಂತರವೂ ಕೂಡ ತಮ್ಮ ಗುರಿಯನ್ನು ಸಾಧಿಸಲು ಶ್ರಮ ಪಡುತ್ತಿದ್ದಾರೆ. ಯಾವುದೇ ಹೆಣ್ಣುಮಕ್ಕಳು ತಮ್ಮ ಕನಸನ್ನು ಕನಸಾಗಿ ಮಣ್ಣು ಮಾಡುವ ಮೊದಲು ತಮ್ಮ ಹೆತ್ತವರ ಹಾಗೂ ತಮ್ಮ ಗಂಡ ಹಾಗೂ ಅವರ ಮನೆಯವರ ಬಳಿ ವ್ಯಕ್ತಪಡಿಸಿದ್ದಲ್ಲಿ ಇನ್ನೊಂದು ಸಫಿಯ ನೀವು ಆಗಬಹುದು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…