ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ.
ನಾವೂರ ಗ್ರಾಮದ ಕನಪಾದೆ ನಿವಾಸಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹಚ್ಚಿದ್ದು ಮುಂಜಾನೆ ಸುಮಾರು 3 ಗಂಟೆ ವೇಳೆ ಮನೆಯಲ್ಲಿ ಮಗು ಜೋರಾಗಿ ಆಳುತ್ತಿದ್ದಾಗ ಮನೆಮಂದಿಗೆ ಎಚ್ಚರವಾಗಿ ನೋಡಿದಾಗ ಬೆಂಕಿ ಕಾಣಿಸಿಕೊಂಡಿದೆ. ಅದಾಗಲೇ ಮನೆಯಲ್ಲಿ ದಾಸ್ತಾನು ಇರಿಸಿದ್ದ ಅಕ್ಕಿ ಗೋಣಿ ಚೀಲಗಳು ಮಕ್ಕಳ ಶಾಲಾ ಸಮವಸ್ತ್ರಗಳು, ಶಾಲಾ ಪಠ್ಯ ಪುಸ್ತಕಗಳು ಮತ್ತು ಮನೆಯವರ ಇತರ ಬಟ್ಟೆ ಬರೆಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟವಾಗಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಟಿ ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…