ಜನ ಮನದ ನಾಡಿ ಮಿಡಿತ

Advertisement

ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲಾ ಸುವರ್ಣಮಹೋತ್ಸವ ಕಟ್ಟಡ ನಿರ್ಮಾಣ ಸಮಿತಿ ಸಭೆಯ ಅಧ್ಯಕ್ಷರಾಗಿ ಡಾ. ಮಮತಾ ಪಿ.ಶೆಟ್ಟಿ ಆಯ್ಕೆ

ಮಂಚಿ ಕೊಳ್ನಾಡು ಪ್ರೌಢಶಾಲೆಯು 1977ರಲ್ಲಿ ಸ್ಥಾಪನೆಗೊಂಡು 2027 ಕ್ಕೆ 50 ವರ್ಷಗಳನ್ನು ಪೂರೈಸಿ ಸುವರ್ಣ ಮಹೋತ್ಸವವನ್ನು ಆಚರಿಸಲಿದೆ. ಈ ಕಾರಣದಿಂದ ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು, ಶಾಲಾ ಹಿತೈಷಿಗಳನ್ನು, ಊರಿನ ವಿದ್ಯಾಭಿಮಾನಿಗಳನ್ನು ಸೇರಿಸಿ ಸುವರ್ಣಮಹೋತ್ಸವ ಕಟ್ಟಡ ನಿರ್ಮಾಣ ಸಮಿತಿ ರಚನಾ ಸಭೆಯನ್ನು ಶಾಲಾ ವತಿಯಿಂದ ಆಯೋಜಿಸಲಾಗಿತ್ತು.

ಈ ಸಂದರ್ಭ ಸುವರ್ಣಮಹೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಡಾ. ಮಮತಾ ಪಿ ಶೆಟ್ಟಿ ಮಂಚಿ, ಪ್ರಧಾನ ಕಾರ್ಯದರ್ಶಿಯಾಗಿ ಮ್ಯಾಕ್ಸಿಮ್ ಫರ್ನಾಂಡಿಸ್, ಪ್ರಧಾನ ಕೋಶಾಧಿಕಾರಿಯಾಗಿ ಉಮಾನಾಥ ರೈ ಮೇರಾವು ಹಾಗೂ ಪ್ರಧಾನ ಸಂಚಾಲಕರಾಗಿ ರಮಾನಂದ ನೂಜಿಪ್ಪಾಡಿ ಆಯ್ಕೆಗೊಂಡಿದ್ದಾರೆ. ಉಳಿದಂತೆ ಇನ್ನಷ್ಟು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೂಡ ಈ ಸಂದರ್ಭದಲ್ಲಿ ನಡೆಯಿತು. ಈ ಸಭೆಯಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ ಮಾತನಾಡಿ, ಶಾಲೆಯ ಹಿರಿಯ ವಿದ್ಯಾರ್ಥಿಯಾಗಿ ಶಾಲೆಯ ಋಣವನ್ನು ತೀರಿಸುವ ಸದಾವಕಾಶ ಒದಗಿ ಬರುವುದು ನಮ್ಮ ಭಾಗ್ಯವಾಗಿದೆ. ಬದುಕು ಕಟ್ಟಿಕೊಟ್ಟ ಶಾಲೆಯ ಸುವರ್ಣ ಸಂಭ್ರಮಕ್ಕೆ ಎಲ್ಲರೂ ಸಾಕ್ಷಿಗಳಾಗಬೇಕು ಎಂದರು.

ಮಾರ್ಗದರ್ಶನ ಸಮಿತಿಯ ನಿವೃತ್ತ ಮುಖ್ಯ ಶಿಕ್ಷಕರಾದ ಪುರುಷೋತ್ತಮ ಟಿ ಮಾತನಾಡಿ, ಸುವರ್ಣ ಸಂಭ್ರಮವನ್ನು ಕಟ್ಟಡ ನಿರ್ಮಾಣದ ಮೂಲಕ ಅರ್ಥಪೂರ್ಣವಾಗಿ ನೆರವೇರಿಸಲು ಮುಂದಾಗಿರುವ ಎಲ್ಲಾ ಹಿರಿಯ ವಿದ್ಯಾರ್ಥಿಗಳು, ಶಾಲೆಯ ಹಿತೈಷಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು. ಶಾಲಾ ಮುಖ್ಯ ಶಿಕ್ಷಕರಾದ ಸುಶೀಲ ವಿಟ್ಲ ಸುವರ್ಣ ಸಂಭ್ರಮದ ಆಶಯ ನುಡಿಗಳನ್ನು ಆಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಾತನಾಡಿ, ಸೌಹಾರ್ಧತೆ, ಸಮಾನತೆಯನ್ನು ಸಾರುವ ಶಾಲೆ ಎಲ್ಲಾ ಸಮುದಾಯದವರ ದೇಗುಲವಾಗಿದ್ದು ಶಾಲೆಯ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಬೇಕು. ಎಂದರು. ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀರಾಮಮೂರ್ತಿ, ಶಾಲಾಭಿವೃದಿ ಸಮಿತಿಯ ಸದಸ್ಯರಾದ ರಮೇಶ್ ರಾವ್ ಪತ್ತುಮುಡಿ, ಗಣೇಶ್ ಪ್ರಭು, ಸುಲೈಮಾನ್ ಜಿ ಸುರಿಬೈಲು, ಗಿರೀಶ್ ಗೌಡ ಮತ್ತು ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿದರು. ತಾರಾನಾಥ್ ಕೈರಂಗಳ ಕಾರ್ಯಕ್ರಮ ನಿರ್ವಹಣೆ ಮಾಡಿ ವಂದಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!