ರಸ್ತೆಯಲ್ಲಿ ಬಿದ್ದು ಸಿಕ್ಕಿದ ಮನಿ ಪಾಕಟೆ ಒಂದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಒಪ್ಪಿಸಿ ರಿಕ್ಷಾ ಚಾಲನೋರ್ವ ಮಾನವೀಯತೆ ಮೆರೆದಿದ್ದಾರೆ.
ಬಂಟ್ವಾಳ ತಾಲೂಕಿನ ನೆಟ್ಲ ನಿವಾಸಿಯಾಗಿರುವ ರಿಕ್ಷಾ ಚಾಲಕ ಪ್ರಸಾದ್ ಜೋಗಿ ಎಂಬವರು ಹಣದ ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್ ನ್ನು ನೀಡಿ ಶಹಬ್ಬಾಸ್ ಎನಿಸಿಕೊಂಡಿದ್ದಾರೆ. ಅನಂತಾಡಿ ನಿವಾಸಿ ಧನ್ಯಶ್ರೀ ಎಂಬವರ ಸಾವಿರಾರು ರೂ ಹಣ ಹಾಗೂ ದಾಖಲೆಗಳಿದ್ದ ಪರ್ಸ್ ಮೆಲ್ಕಾರ್ ಸರ್ವೀಸ್ ರಸ್ತೆಯಲ್ಲಿ ಆ.12 ರಂದು ರಾತ್ರಿ 9 ಗಂಟೆ ವೇಳೆಗೆ ಕಳೆದುಹೋಗಿತ್ತು. ಮೆಲ್ಕಾರ್ ಸರ್ವೀಸ್ ರಸ್ತೆಯಲ್ಲಿ ಬಿದ್ದ ಪರ್ಸ್ ಪ್ರಸಾದ್ ಜೋಗಿಯವರಿಗೆ ಸಿಕ್ಕಿದ್ದು, ಪರ್ಸ್ ನೊಳಗಡೆ ಇದ್ದ ಆಧಾರ್ ಕಾರ್ಡ್ ನಲ್ಲಿ ಧನ್ಯಶ್ರೀ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದರು. ಇಂದು ಬೆಳಿಗ್ಗೆ ಧನ್ಯಶ್ರೀ ಅವರಿಗೆ ಪರ್ಸ್ ನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…