ರಸ್ತೆಯಲ್ಲಿ ಬಿದ್ದು ಸಿಕ್ಕಿದ ಮನಿ ಪಾಕಟೆ ಒಂದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಒಪ್ಪಿಸಿ ರಿಕ್ಷಾ ಚಾಲನೋರ್ವ ಮಾನವೀಯತೆ ಮೆರೆದಿದ್ದಾರೆ.
ಬಂಟ್ವಾಳ ತಾಲೂಕಿನ ನೆಟ್ಲ ನಿವಾಸಿಯಾಗಿರುವ ರಿಕ್ಷಾ ಚಾಲಕ ಪ್ರಸಾದ್ ಜೋಗಿ ಎಂಬವರು ಹಣದ ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್ ನ್ನು ನೀಡಿ ಶಹಬ್ಬಾಸ್ ಎನಿಸಿಕೊಂಡಿದ್ದಾರೆ. ಅನಂತಾಡಿ ನಿವಾಸಿ ಧನ್ಯಶ್ರೀ ಎಂಬವರ ಸಾವಿರಾರು ರೂ ಹಣ ಹಾಗೂ ದಾಖಲೆಗಳಿದ್ದ ಪರ್ಸ್ ಮೆಲ್ಕಾರ್ ಸರ್ವೀಸ್ ರಸ್ತೆಯಲ್ಲಿ ಆ.12 ರಂದು ರಾತ್ರಿ 9 ಗಂಟೆ ವೇಳೆಗೆ ಕಳೆದುಹೋಗಿತ್ತು. ಮೆಲ್ಕಾರ್ ಸರ್ವೀಸ್ ರಸ್ತೆಯಲ್ಲಿ ಬಿದ್ದ ಪರ್ಸ್ ಪ್ರಸಾದ್ ಜೋಗಿಯವರಿಗೆ ಸಿಕ್ಕಿದ್ದು, ಪರ್ಸ್ ನೊಳಗಡೆ ಇದ್ದ ಆಧಾರ್ ಕಾರ್ಡ್ ನಲ್ಲಿ ಧನ್ಯಶ್ರೀ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದರು. ಇಂದು ಬೆಳಿಗ್ಗೆ ಧನ್ಯಶ್ರೀ ಅವರಿಗೆ ಪರ್ಸ್ ನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…