ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಪಿಗ್ಮಿ ಸಂಗ್ರಾಹಕ ತಾರನಾಥ್ ಹೆಚ್.ಹೃದಯಾಘಾತದಿಂದ ಸಾವು

ಪುತ್ತೂರಿನಲ್ಲಿ ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್.ನಾರಾಯಣ ಅವರ ಮಗ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್.(49ವ.)ರವರು ಹೃದಯಾಘಾತದಿಂದಾಗಿ ಅ.13ರಂದು ರಾತ್ರಿ ನಿಧನರಾದರು.

ಆರಂಭದಲ್ಲಿ ತಂದೆ, ಸಹೋದರರ ಜೊತೆ ಹೆಚ್.ನಾರಾಯಣ ಆಂಡ್ ಸನ್ಸ್ ಜವುಳಿ ಮಳಿಗೆಯಲ್ಲಿಯೇ ವ್ಯವಹಾರ ನಿರತರಾಗಿದ್ದ ಅವರು ಇತ್ತೀಚಿನ ಕೆಲ ವರ್ಷಗಳಿಂದ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದರು. ಅ.13ರಂದೂ ಎಂದಿನAತೆ ಪಿಗ್ಮಿ ಸಂಗ್ರಹಣೆ ಮಾಡಿದ್ದ ಅವರಿಗೆ ರಾತ್ರಿ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿತೆಂದು ಕೂಡಲೇ ಮನೆಯವರು ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗಲಿಲ್ಲ. ಕಳೆದ 9 ವರ್ಷಗಳಿಂದ ಪುತ್ತೂರಿನ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಸುದಾನದಲ್ಲಿ ಶಿಕ್ಷಕಿಯಾಗಿರುವ ಪತ್ನಿ ವಿನುತಾ ಹಾಗೂ ಇಬ್ಬರು ಮಕ್ಕಳು, ಮಾಜಿ ಪುರಸಭೆಯ ಉಪಾಧ್ಯಕ್ಷರಾಗಿರುವ ಸಹೋದರ ಹೆಚ್.ಉದಯ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!