ಪುತ್ತೂರಿನಲ್ಲಿ ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್.ನಾರಾಯಣ ಅವರ ಮಗ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್.(49ವ.)ರವರು ಹೃದಯಾಘಾತದಿಂದಾಗಿ ಅ.13ರಂದು ರಾತ್ರಿ ನಿಧನರಾದರು.
ಆರಂಭದಲ್ಲಿ ತಂದೆ, ಸಹೋದರರ ಜೊತೆ ಹೆಚ್.ನಾರಾಯಣ ಆಂಡ್ ಸನ್ಸ್ ಜವುಳಿ ಮಳಿಗೆಯಲ್ಲಿಯೇ ವ್ಯವಹಾರ ನಿರತರಾಗಿದ್ದ ಅವರು ಇತ್ತೀಚಿನ ಕೆಲ ವರ್ಷಗಳಿಂದ ಪಿಗ್ಮಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದರು. ಅ.13ರಂದೂ ಎಂದಿನAತೆ ಪಿಗ್ಮಿ ಸಂಗ್ರಹಣೆ ಮಾಡಿದ್ದ ಅವರಿಗೆ ರಾತ್ರಿ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿತೆಂದು ಕೂಡಲೇ ಮನೆಯವರು ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗಲಿಲ್ಲ. ಕಳೆದ 9 ವರ್ಷಗಳಿಂದ ಪುತ್ತೂರಿನ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಸುದಾನದಲ್ಲಿ ಶಿಕ್ಷಕಿಯಾಗಿರುವ ಪತ್ನಿ ವಿನುತಾ ಹಾಗೂ ಇಬ್ಬರು ಮಕ್ಕಳು, ಮಾಜಿ ಪುರಸಭೆಯ ಉಪಾಧ್ಯಕ್ಷರಾಗಿರುವ ಸಹೋದರ ಹೆಚ್.ಉದಯ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…