ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಗೆ ತಾಗಿಕೊಂಡಿರುವ ಪುದು ಗ್ರಾಮಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿಗಾಗಿ ಕೋಡಿ ಮಜಲು ತೇವು ಎಂಬಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವಾಗುತ್ತಿದ್ದು ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದೆ, ಅಂದುಕೊಂಡಂತೆ ಬಾಕಿ ಉಳಿದಿರುವ ಸಣ್ಣ ಪುಟ್ಟ ಕಾಮಗಾರಿಗಳು ನಡೆದರೆ ನವೆಂಬರ್ ತಿಂಗಳಲ್ಲಿ ಘಟಕದ ಉದ್ಘಾಟನೆಯಾಗಲಿದೆ.
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಗ್ರಾಮಪಂಚಾಯತ್ ಆಗಿರುವುದರಿಂದ ಇಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದು ಕಷ್ಟದ ಕೆಲಸವಾಗಿದೆ, ಜೊತೆಗೆ ಹೆದ್ದಾರಿ ಬದಿಯಲ್ಲಿ ಸಿಕ್ಕ ಸಿಕ್ಕ ಕಡೆಗಳಲ್ಲಿ ಕಸ ಎಸೆಯಲಾಗುತ್ತಿದ್ದು, ಕಸ ಎಸೆಯುವುದನ್ನು ತಡೆಯುವ ದೃಷ್ಟಿಯಿಂದ ಮತ್ತು ಸ್ವಚ್ಚತಾ ಕಾರ್ಯದ ಬಗ್ಗೆ ಗ್ರಾಮ ಪಂಚಾಯತ್ ವಿಶೇಷ ಅಭಿಯಾನದ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿ ಯಶಸ್ವಿಯಾಗಿತ್ತಾದರೂ ಸಂಪೂರ್ಣ ತ್ಯಾಜ್ಯ ಮುಕ್ತವಾದ ಗ್ರಾಮವನ್ನಾಗಿ ಮಾಡುವ ಉದ್ದೇಶದಿಂದ ಕೋಡಿಮಜಲು ತೇವು ಎಂಬಲ್ಲಿ ಘಟಕ ನಿರ್ಮಾಣ ಮಾಡಲಾಗಿದೆ.
ಇನ್ನೇನು ತಿಂಗೊಳಗೆ ಸಕಲ ವ್ಯವಸ್ಥೆಯ ಸಂಪೂರ್ಣ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯದ ವಿಲೇವಾರಿ ಮಾಡುವ ಬಗ್ಗೆ ಇಲ್ಲಿನ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ರುಕ್ಸಾನಾ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಸೇರಿದಮತೆ ಮತ್ತಿತರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…