ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

ಕದ್ರಿ ಯಕ್ಷ ಬಳಗವು ಈ ವರ್ಷದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಪ್ರಶಸ್ತಿಯನ್ನು ಪಾವಂಜೆ ಮೇಳದ ಪ್ರಧಾನ ವೇಷಧಾರಿ, ಪ್ರಬಂದಕ ಡಿ.ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ನೀಡಿ ಗೌರವಿಸಲಿದೆ.

ಇವರು ಕಳೆದ ಮೂರು ದಶಕಗಳಿಂದ ಯಕ್ಷಗಾನ ರಂಗದಲ್ಲಿ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಿಷ್ಣು, ಜಾಬಾಲಿ ಮೊದಲಾದ ಸಾತ್ವಿಕ ಪಾತ್ರಗಳನ್ನು ನಿರ್ವಹಿಸಿ, “ಮಾನಿಷಾದ” ಪ್ರಸಂಗದ ಶ್ರೀ ರಾಮನ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಹೊಂದಿರುವ “ಯಕ್ಷ ರಾಮ” ಬಿರುದು ಪಡೆದ ಸರಳ ಸಜ್ಜನಿಕೆಯ ಕಲಾವಿದರಾಗಿದ್ದಾರೆ. ಕಟೀಲು ಮೇಳದಲ್ಲಿ ಕಲಾ ಜೀವನ ಆರಂಭ ಮಾಡಿ ಒಂದೂವರೆ ದಶಕ ಸೇವೆ ಸಲ್ಲಿಸಿ, ಬಪ್ಪನಾಡು, ಸುಂಕದಕಟ್ಟೆ ಮೇಳಗಳಲ್ಲಿ ತಿರುಗಾಟ ಅನುಭವ ಪಡೆದವರು. ಪಟ್ಲ ಭಾಗವತರ ನೆಚ್ಚಿನ ಕಲಾವಿದನಾಗಿ ಬೆಳೆದು ಪಾವಂಜೆ ಮೇಳದಲ್ಲಿ ಕಲಾ ಯಾನ ಮುಂದುವರಿಸುತ್ತಿರುವ ಇವರು ಹಲವಾರು ಯಕ್ಷಗಾನ ಬಯಲಾಟ, ತಾಳಮದ್ದಳೆ, ಗಾನ -ನಾಟ್ಯ ವೈಭವಗಳನ್ನು ಸಂಯೋಜಿಸಿದ್ದಾರೆ. ನಿರೂಪಕರಾಗಿಯೂ ಜನಪ್ರಿಯತೆ ಗಳಿಸಿದ್ದಾರೆ. ಕದ್ರಿ ಕಂಬಳ ಗುತ್ತಿನ ಯಜಮಾನರಾಗಿ ಹಲವು ದಶಕ ಗಳ ಕಾಲ ಇತಿಹಾಸ ಪ್ರಸಿದ್ದ ಸಂಪ್ರದಾಯಿಕ ಕದ್ರಿ ಕಂಬಳವನ್ನು ಸಂಘಟಿಸಿದ್ದ ಹಿರಿಯ ಹವ್ಯಾಸಿ ಅರ್ಥಧಾರಿ ಸ್ವಗ್ಗೀðಯ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣಾರ್ಥ ಪ್ರಶಸ್ತಿ ನೀಡಲಾಗುತ್ತಿದೆ. ನವೆಂಬರ್ 4 ರಂದು ಕದ್ರಿ ದೇವಸ್ಥಾನದಲ್ಲಿ ಪಾವಂಜೆ ಮೇಳದ ಸೇವೆ ಬಯಲಾಟ “ಛಾಯಾ ನಂದನ” ನೂತನ ಪ್ರಸಂಗ ಪ್ರದರ್ಶನ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕದ್ರಿ ಯಕ್ಷ ಬಳಗದ ಕದ್ರಿ ನವನೀತ ಶೆಟ್ಟಿ ಹಾಗೂ ಪ್ರದೀಪ್ ಆಳ್ವ ಕದ್ರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!