ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು.

ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ ಪ್ರೋತ್ಸಾಹ ಅಗತ್ಯ. ಕಲಾವಿದರಿಗೆ ತೊಂದರೆಯಾದಾಗ ಒಗ್ಗಟ್ಟಿನ ಧ್ವನಿಯಾಗಲು ಹಿಂದೆ ಮುಂದೆ ನೋಡುವುದು ಬೇಡ. ಒಕ್ಕೂಟ ಇನ್ನಷ್ಟು ವೃದ್ಧಿಸಬೇಕು. ಕಲಾಪೋಷಕರಿಂದ ಇದು ಸಾಧ್ಯವಾಗಲು ಸಾಧ್ಯ ಎಂದು ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಹೇಳಿದ್ದಾರೆ. ಅವರು ಕದ್ರಿ ಲಯನ್ಸ್ ಅಶೋಕ ಭವನದಲ್ಲಿ ನಡೆದ ತುಳು ನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಅವರು ಪುನರಾಯ್ಕೆಗೊಂಡರು. ಅಶಕ್ತ ಸದಸ್ಯರಿಗೆ ಸಹಾಯ ಧನವನ್ನು ಹಸ್ತಾಂತರಿಸಲಾಯಿತು. ಹೆಚ್ಚುವರಿಯಾಗಿ ಕಾರ್ಯಕಾರಿ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಇನ್ನು ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ತಾರಾನಾಥ ಶೆಟ್ಟಿ ಬೋಳಾರ, ಗೋಕುಲ್ ಕದ್ರಿ, ಕಲಾವಿದರ ನಿಧಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!