ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು.

ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ ಪ್ರೋತ್ಸಾಹ ಅಗತ್ಯ. ಕಲಾವಿದರಿಗೆ ತೊಂದರೆಯಾದಾಗ ಒಗ್ಗಟ್ಟಿನ ಧ್ವನಿಯಾಗಲು ಹಿಂದೆ ಮುಂದೆ ನೋಡುವುದು ಬೇಡ. ಒಕ್ಕೂಟ ಇನ್ನಷ್ಟು ವೃದ್ಧಿಸಬೇಕು. ಕಲಾಪೋಷಕರಿಂದ ಇದು ಸಾಧ್ಯವಾಗಲು ಸಾಧ್ಯ ಎಂದು ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಹೇಳಿದ್ದಾರೆ. ಅವರು ಕದ್ರಿ ಲಯನ್ಸ್ ಅಶೋಕ ಭವನದಲ್ಲಿ ನಡೆದ ತುಳು ನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಅವರು ಪುನರಾಯ್ಕೆಗೊಂಡರು. ಅಶಕ್ತ ಸದಸ್ಯರಿಗೆ ಸಹಾಯ ಧನವನ್ನು ಹಸ್ತಾಂತರಿಸಲಾಯಿತು. ಹೆಚ್ಚುವರಿಯಾಗಿ ಕಾರ್ಯಕಾರಿ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಇನ್ನು ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ತಾರಾನಾಥ ಶೆಟ್ಟಿ ಬೋಳಾರ, ಗೋಕುಲ್ ಕದ್ರಿ, ಕಲಾವಿದರ ನಿಧಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!