ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು.
ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ ಪ್ರೋತ್ಸಾಹ ಅಗತ್ಯ. ಕಲಾವಿದರಿಗೆ ತೊಂದರೆಯಾದಾಗ ಒಗ್ಗಟ್ಟಿನ ಧ್ವನಿಯಾಗಲು ಹಿಂದೆ ಮುಂದೆ ನೋಡುವುದು ಬೇಡ. ಒಕ್ಕೂಟ ಇನ್ನಷ್ಟು ವೃದ್ಧಿಸಬೇಕು. ಕಲಾಪೋಷಕರಿಂದ ಇದು ಸಾಧ್ಯವಾಗಲು ಸಾಧ್ಯ ಎಂದು ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಹೇಳಿದ್ದಾರೆ. ಅವರು ಕದ್ರಿ ಲಯನ್ಸ್ ಅಶೋಕ ಭವನದಲ್ಲಿ ನಡೆದ ತುಳು ನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಅವರು ಪುನರಾಯ್ಕೆಗೊಂಡರು. ಅಶಕ್ತ ಸದಸ್ಯರಿಗೆ ಸಹಾಯ ಧನವನ್ನು ಹಸ್ತಾಂತರಿಸಲಾಯಿತು. ಹೆಚ್ಚುವರಿಯಾಗಿ ಕಾರ್ಯಕಾರಿ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಇನ್ನು ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ತಾರಾನಾಥ ಶೆಟ್ಟಿ ಬೋಳಾರ, ಗೋಕುಲ್ ಕದ್ರಿ, ಕಲಾವಿದರ ನಿಧಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…