ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು.
ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ ಪ್ರೋತ್ಸಾಹ ಅಗತ್ಯ. ಕಲಾವಿದರಿಗೆ ತೊಂದರೆಯಾದಾಗ ಒಗ್ಗಟ್ಟಿನ ಧ್ವನಿಯಾಗಲು ಹಿಂದೆ ಮುಂದೆ ನೋಡುವುದು ಬೇಡ. ಒಕ್ಕೂಟ ಇನ್ನಷ್ಟು ವೃದ್ಧಿಸಬೇಕು. ಕಲಾಪೋಷಕರಿಂದ ಇದು ಸಾಧ್ಯವಾಗಲು ಸಾಧ್ಯ ಎಂದು ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ. ಶೆಟ್ಟಿ ಹೇಳಿದ್ದಾರೆ. ಅವರು ಕದ್ರಿ ಲಯನ್ಸ್ ಅಶೋಕ ಭವನದಲ್ಲಿ ನಡೆದ ತುಳು ನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಅವರು ಪುನರಾಯ್ಕೆಗೊಂಡರು. ಅಶಕ್ತ ಸದಸ್ಯರಿಗೆ ಸಹಾಯ ಧನವನ್ನು ಹಸ್ತಾಂತರಿಸಲಾಯಿತು. ಹೆಚ್ಚುವರಿಯಾಗಿ ಕಾರ್ಯಕಾರಿ ಮಂಡಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಇನ್ನು ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ತಾರಾನಾಥ ಶೆಟ್ಟಿ ಬೋಳಾರ, ಗೋಕುಲ್ ಕದ್ರಿ, ಕಲಾವಿದರ ನಿಧಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…