ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ. ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ. ಅದೇ ರೀತಿ ಕೌಶಲ್ಯ, ಅಂಜಲಿನ್ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್‌ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್ ನೌಕರ ಎಂದು ಪೋನ್ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ಕೌಶಲ್ಯಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!