ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ. ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ. ಅದೇ ರೀತಿ ಕೌಶಲ್ಯ, ಅಂಜಲಿನ್ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್ ನೌಕರ ಎಂದು ಪೋನ್ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ಕೌಶಲ್ಯಳನ್ನು ಬಂಧಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…