ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ. ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ. ಅದೇ ರೀತಿ ಕೌಶಲ್ಯ, ಅಂಜಲಿನ್ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್ ನೌಕರ ಎಂದು ಪೋನ್ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ಕೌಶಲ್ಯಳನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…