ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.
ದ.ಕ.ಜಿಲ್ಲೆಯ ಶ್ರೀರಾಮ ಯಜ್ಞ ಯಕ್ಷ ಅಭಿಯಾನ ತಂಡದಿಂದ ಸೇವೆಯ ರೂಪದಲ್ಲಿ ಪ್ರದರ್ಶನಗೊಂಡಿರುವುದು ಕರ್ನಾಟಕ ರಾಜ್ಯಕ್ಕೆ ಹಿರಿಮೆಯನ್ನು ತಂದಿದೆ. ಆಯೋಧ್ಯೆ ಯಕ್ಷ ಯಾತ್ರೆಯ ಪ್ರಯುಕ್ತವಾಗಿ ತಂಡದ ಅಧ್ಯಕ್ಷ ಡಿ.ಮನೋಹರ ಕುಮಾರ್ ನೇತ್ರತ್ವದಲ್ಲಿ ಆಯೋಧ್ಯೆ ಟ್ರಸ್ಟಿಯಾಗಿರುವ ಗೋಪಾಲ ಜೀ ಅವರ ಸಹಕಾರದಿಂದ ಪ್ರಥಮ ಬಾರಿಗೆ ಆಯೋಧ್ಯೆಯಲ್ಲಿ “ಶ್ರೀ ರಾಮ ಚರಿತ” ಎಂಬ ಯಕ್ಷಗಾನದ ಪ್ರದರ್ಶನಗೊಂಡಿದ್ದಲ್ಲದೆ ಆಯೋಧ್ಯೆಯ ಜನತೆಗೆ ಯಕ್ಷಗಾನದ ಅಭಿರುಚಿಯ ಪರಿಚಯ ಮಾಡಿದ್ದಾರೆ ಎಂಬ ಹೆಗ್ಗಳಿಕೆ ಇವರದು. ಆಯೋಧ್ಯೆ ಯಕ್ಷ ಯಾತ್ರೆಯ ಸದುದ್ದೇಶದಿಂದ ಇಡೀ ತಂಡ ಅವಿಭಜಿತ ದ.ಕ.ಜಿಲ್ಲೆಯ 14 ಕಡೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಯಕ್ಷಾಭಿಮಾನಿಗಳ ಸಹಕಾರದೊಂದಿಗೆ “ಶ್ರೀರಾಮನ ಚರಿತ್ರೆಯ” ಯಕ್ಷಗಾನದ ಪ್ರದರ್ಶನವನ್ನು ಮಾಡಿದ್ದು. 15 ನೇ ಯಕ್ಷಗಾನ ಸೇವೆಯಾಟ ಆಯೋಧ್ಯೆ ಶ್ರೀರಾಮನ ಪುಣ್ಯ ಭೂಮಿಯಲ್ಲಿ ಪ್ರದರ್ಶನವಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…