ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.
ದ.ಕ.ಜಿಲ್ಲೆಯ ಶ್ರೀರಾಮ ಯಜ್ಞ ಯಕ್ಷ ಅಭಿಯಾನ ತಂಡದಿಂದ ಸೇವೆಯ ರೂಪದಲ್ಲಿ ಪ್ರದರ್ಶನಗೊಂಡಿರುವುದು ಕರ್ನಾಟಕ ರಾಜ್ಯಕ್ಕೆ ಹಿರಿಮೆಯನ್ನು ತಂದಿದೆ. ಆಯೋಧ್ಯೆ ಯಕ್ಷ ಯಾತ್ರೆಯ ಪ್ರಯುಕ್ತವಾಗಿ ತಂಡದ ಅಧ್ಯಕ್ಷ ಡಿ.ಮನೋಹರ ಕುಮಾರ್ ನೇತ್ರತ್ವದಲ್ಲಿ ಆಯೋಧ್ಯೆ ಟ್ರಸ್ಟಿಯಾಗಿರುವ ಗೋಪಾಲ ಜೀ ಅವರ ಸಹಕಾರದಿಂದ ಪ್ರಥಮ ಬಾರಿಗೆ ಆಯೋಧ್ಯೆಯಲ್ಲಿ “ಶ್ರೀ ರಾಮ ಚರಿತ” ಎಂಬ ಯಕ್ಷಗಾನದ ಪ್ರದರ್ಶನಗೊಂಡಿದ್ದಲ್ಲದೆ ಆಯೋಧ್ಯೆಯ ಜನತೆಗೆ ಯಕ್ಷಗಾನದ ಅಭಿರುಚಿಯ ಪರಿಚಯ ಮಾಡಿದ್ದಾರೆ ಎಂಬ ಹೆಗ್ಗಳಿಕೆ ಇವರದು. ಆಯೋಧ್ಯೆ ಯಕ್ಷ ಯಾತ್ರೆಯ ಸದುದ್ದೇಶದಿಂದ ಇಡೀ ತಂಡ ಅವಿಭಜಿತ ದ.ಕ.ಜಿಲ್ಲೆಯ 14 ಕಡೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಯಕ್ಷಾಭಿಮಾನಿಗಳ ಸಹಕಾರದೊಂದಿಗೆ “ಶ್ರೀರಾಮನ ಚರಿತ್ರೆಯ” ಯಕ್ಷಗಾನದ ಪ್ರದರ್ಶನವನ್ನು ಮಾಡಿದ್ದು. 15 ನೇ ಯಕ್ಷಗಾನ ಸೇವೆಯಾಟ ಆಯೋಧ್ಯೆ ಶ್ರೀರಾಮನ ಪುಣ್ಯ ಭೂಮಿಯಲ್ಲಿ ಪ್ರದರ್ಶನವಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…