ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ.
ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ ಮನೆ ಆವರಣದಲ್ಲಿರುವ 15 ಅಡಿ ಬಾವಿಗೆ ಬಿದ್ದಿದ್ದು, ಮಗುವನ್ನು ಸ್ಥಳೀಯ ಯುವಕ ಜೀವದ ಹಂಗು ತೊರೆದು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ದೇರಳಕಟ್ಟೆ ಬೆಳ್ಮ ಗ್ರಾಮದ ಮಾರಿಯಮ್ಮಗೋಳಿ ದೈವಸ್ಥಾನದ ಸಮೀಪ ನಡೆದಿದೆ. ಗುರುಪ್ರಸಾದ್ ಎಂಬವರ ಮಗಳಾದ ಎರಡೂವರೆ ಹರೆಯದ ಹಿಮಾನಿ ರಕ್ಷಿಸಲ್ಪಟ್ಟ ಹೆಣ್ಣು ಮಗು. ಮನೆಮಂದಿ ಅಂಗಳದಲ್ಲಿ ಕುಳಿತಿದ್ದ ಸಂದರ್ಭ ಅಂಗಳದಲ್ಲಿ ಆಟವಾಡುತ್ತಾ ಮಗು ಮನೆ ಆವರಣದಲ್ಲಿನ ತೆರೆದ ಬಾವಿಯೊಳಗೆ ಬಿದ್ದಿದೆ.
15 ಅಡಿ ಆಳದ ನೀರಿದ್ದ ಬಾವಿಯೊಳಗೆ ಬಿದ್ದ ಮಗುವನ್ನು ತಕ್ಷಣ ಚಿಕ್ಕಪ್ಪ ಜೀವನ್ ಎಂಬವರು ಹಗ್ಗ ಹಾಕಿ ರಕ್ಷಿಸಲು ಬಾವಿಗೆ ಇಳಿದಿದ್ದಾರೆ. ಆದರೆ ಈಜು ಬಾರದೇ ಇರುವುದರಿಂದ ಹಗ್ಗದ ಸಹಾಯದಲ್ಲಿ ನಿಂತು ಮಗುವಿನ ಕೈಯನ್ನು ಹಿಡಿದುಕೊಂಡು ಮೇಲೆ ಬರಲು ಸಾಧ್ಯವಾಗದೇ ಅಲ್ಲೇ ಉಳಿದಿದ್ರು. ಅದಾಗಲೇ ಒಂದು ಬಾರಿ ನೀರಿನೊಳಗೆ ಹೋಗಿ ಮಗು ಮೇಲೆ ಬಂದಿತ್ತು. ಟೀಂ ಪೆಲತ್ತಡಿ ಫ್ರೆಂಡ್ಸ್ನ ಯುವಕರು ಆಟವಾಡಲು ಗದ್ದೆಗೆ ಹೋಗುವ ಸಂದರ್ಭ ಮಗು ಬಾವಿಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಮಂದಿಯ ರೋದನ ಕಂಡು ತಕ್ಷಣ ಸ್ಥಳಕ್ಕೆ ಧಾವಿಸಿದ ಯುವಕರ ಪೈಕಿ ವಿವೇಕ್ ಅವರು ಅದೇ ಹಗ್ಗದ ಮೂಲಕ ಕೆಳಗಿಳಿದು ಬಾವಿಯ ನೀರಿಗೆ ಧುಮುಕಿದ್ದಾರೆ. ಇವರಿಗೆ ಸ್ನೇಹಿತ ಧನಂಜಯ್ ಸೇರಿದಂತೆ ಸ್ಥಳೀಯ ಯುವಕರು ಹಗ್ಗವನ್ನು ಹಿಡಿಯುವುದರ ಜೊತೆಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಗುವನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ವಿವೇಕ್ ಗಾರ್ಡನಿಂಗ್ ಸಂಸ್ಥೆಯಲ್ಲಿ ಸುಪರ್ ವೈಸರ್ ಆಗಿ ದುಡಿಯುತ್ತಿದ್ದಾರೆ.
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…