ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ.
ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ ಮನೆ ಆವರಣದಲ್ಲಿರುವ 15 ಅಡಿ ಬಾವಿಗೆ ಬಿದ್ದಿದ್ದು, ಮಗುವನ್ನು ಸ್ಥಳೀಯ ಯುವಕ ಜೀವದ ಹಂಗು ತೊರೆದು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ದೇರಳಕಟ್ಟೆ ಬೆಳ್ಮ ಗ್ರಾಮದ ಮಾರಿಯಮ್ಮಗೋಳಿ ದೈವಸ್ಥಾನದ ಸಮೀಪ ನಡೆದಿದೆ. ಗುರುಪ್ರಸಾದ್ ಎಂಬವರ ಮಗಳಾದ ಎರಡೂವರೆ ಹರೆಯದ ಹಿಮಾನಿ ರಕ್ಷಿಸಲ್ಪಟ್ಟ ಹೆಣ್ಣು ಮಗು. ಮನೆಮಂದಿ ಅಂಗಳದಲ್ಲಿ ಕುಳಿತಿದ್ದ ಸಂದರ್ಭ ಅಂಗಳದಲ್ಲಿ ಆಟವಾಡುತ್ತಾ ಮಗು ಮನೆ ಆವರಣದಲ್ಲಿನ ತೆರೆದ ಬಾವಿಯೊಳಗೆ ಬಿದ್ದಿದೆ.
15 ಅಡಿ ಆಳದ ನೀರಿದ್ದ ಬಾವಿಯೊಳಗೆ ಬಿದ್ದ ಮಗುವನ್ನು ತಕ್ಷಣ ಚಿಕ್ಕಪ್ಪ ಜೀವನ್ ಎಂಬವರು ಹಗ್ಗ ಹಾಕಿ ರಕ್ಷಿಸಲು ಬಾವಿಗೆ ಇಳಿದಿದ್ದಾರೆ. ಆದರೆ ಈಜು ಬಾರದೇ ಇರುವುದರಿಂದ ಹಗ್ಗದ ಸಹಾಯದಲ್ಲಿ ನಿಂತು ಮಗುವಿನ ಕೈಯನ್ನು ಹಿಡಿದುಕೊಂಡು ಮೇಲೆ ಬರಲು ಸಾಧ್ಯವಾಗದೇ ಅಲ್ಲೇ ಉಳಿದಿದ್ರು. ಅದಾಗಲೇ ಒಂದು ಬಾರಿ ನೀರಿನೊಳಗೆ ಹೋಗಿ ಮಗು ಮೇಲೆ ಬಂದಿತ್ತು. ಟೀಂ ಪೆಲತ್ತಡಿ ಫ್ರೆಂಡ್ಸ್ನ ಯುವಕರು ಆಟವಾಡಲು ಗದ್ದೆಗೆ ಹೋಗುವ ಸಂದರ್ಭ ಮಗು ಬಾವಿಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಮಂದಿಯ ರೋದನ ಕಂಡು ತಕ್ಷಣ ಸ್ಥಳಕ್ಕೆ ಧಾವಿಸಿದ ಯುವಕರ ಪೈಕಿ ವಿವೇಕ್ ಅವರು ಅದೇ ಹಗ್ಗದ ಮೂಲಕ ಕೆಳಗಿಳಿದು ಬಾವಿಯ ನೀರಿಗೆ ಧುಮುಕಿದ್ದಾರೆ. ಇವರಿಗೆ ಸ್ನೇಹಿತ ಧನಂಜಯ್ ಸೇರಿದಂತೆ ಸ್ಥಳೀಯ ಯುವಕರು ಹಗ್ಗವನ್ನು ಹಿಡಿಯುವುದರ ಜೊತೆಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಗುವನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ವಿವೇಕ್ ಗಾರ್ಡನಿಂಗ್ ಸಂಸ್ಥೆಯಲ್ಲಿ ಸುಪರ್ ವೈಸರ್ ಆಗಿ ದುಡಿಯುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…