ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ.
ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ ಮನೆ ಆವರಣದಲ್ಲಿರುವ 15 ಅಡಿ ಬಾವಿಗೆ ಬಿದ್ದಿದ್ದು, ಮಗುವನ್ನು ಸ್ಥಳೀಯ ಯುವಕ ಜೀವದ ಹಂಗು ತೊರೆದು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ದೇರಳಕಟ್ಟೆ ಬೆಳ್ಮ ಗ್ರಾಮದ ಮಾರಿಯಮ್ಮಗೋಳಿ ದೈವಸ್ಥಾನದ ಸಮೀಪ ನಡೆದಿದೆ. ಗುರುಪ್ರಸಾದ್ ಎಂಬವರ ಮಗಳಾದ ಎರಡೂವರೆ ಹರೆಯದ ಹಿಮಾನಿ ರಕ್ಷಿಸಲ್ಪಟ್ಟ ಹೆಣ್ಣು ಮಗು. ಮನೆಮಂದಿ ಅಂಗಳದಲ್ಲಿ ಕುಳಿತಿದ್ದ ಸಂದರ್ಭ ಅಂಗಳದಲ್ಲಿ ಆಟವಾಡುತ್ತಾ ಮಗು ಮನೆ ಆವರಣದಲ್ಲಿನ ತೆರೆದ ಬಾವಿಯೊಳಗೆ ಬಿದ್ದಿದೆ.
15 ಅಡಿ ಆಳದ ನೀರಿದ್ದ ಬಾವಿಯೊಳಗೆ ಬಿದ್ದ ಮಗುವನ್ನು ತಕ್ಷಣ ಚಿಕ್ಕಪ್ಪ ಜೀವನ್ ಎಂಬವರು ಹಗ್ಗ ಹಾಕಿ ರಕ್ಷಿಸಲು ಬಾವಿಗೆ ಇಳಿದಿದ್ದಾರೆ. ಆದರೆ ಈಜು ಬಾರದೇ ಇರುವುದರಿಂದ ಹಗ್ಗದ ಸಹಾಯದಲ್ಲಿ ನಿಂತು ಮಗುವಿನ ಕೈಯನ್ನು ಹಿಡಿದುಕೊಂಡು ಮೇಲೆ ಬರಲು ಸಾಧ್ಯವಾಗದೇ ಅಲ್ಲೇ ಉಳಿದಿದ್ರು. ಅದಾಗಲೇ ಒಂದು ಬಾರಿ ನೀರಿನೊಳಗೆ ಹೋಗಿ ಮಗು ಮೇಲೆ ಬಂದಿತ್ತು. ಟೀಂ ಪೆಲತ್ತಡಿ ಫ್ರೆಂಡ್ಸ್ನ ಯುವಕರು ಆಟವಾಡಲು ಗದ್ದೆಗೆ ಹೋಗುವ ಸಂದರ್ಭ ಮಗು ಬಾವಿಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಮಂದಿಯ ರೋದನ ಕಂಡು ತಕ್ಷಣ ಸ್ಥಳಕ್ಕೆ ಧಾವಿಸಿದ ಯುವಕರ ಪೈಕಿ ವಿವೇಕ್ ಅವರು ಅದೇ ಹಗ್ಗದ ಮೂಲಕ ಕೆಳಗಿಳಿದು ಬಾವಿಯ ನೀರಿಗೆ ಧುಮುಕಿದ್ದಾರೆ. ಇವರಿಗೆ ಸ್ನೇಹಿತ ಧನಂಜಯ್ ಸೇರಿದಂತೆ ಸ್ಥಳೀಯ ಯುವಕರು ಹಗ್ಗವನ್ನು ಹಿಡಿಯುವುದರ ಜೊತೆಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಗುವನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ವಿವೇಕ್ ಗಾರ್ಡನಿಂಗ್ ಸಂಸ್ಥೆಯಲ್ಲಿ ಸುಪರ್ ವೈಸರ್ ಆಗಿ ದುಡಿಯುತ್ತಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…