ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ.
ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ ಮನೆ ಆವರಣದಲ್ಲಿರುವ 15 ಅಡಿ ಬಾವಿಗೆ ಬಿದ್ದಿದ್ದು, ಮಗುವನ್ನು ಸ್ಥಳೀಯ ಯುವಕ ಜೀವದ ಹಂಗು ತೊರೆದು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ದೇರಳಕಟ್ಟೆ ಬೆಳ್ಮ ಗ್ರಾಮದ ಮಾರಿಯಮ್ಮಗೋಳಿ ದೈವಸ್ಥಾನದ ಸಮೀಪ ನಡೆದಿದೆ. ಗುರುಪ್ರಸಾದ್ ಎಂಬವರ ಮಗಳಾದ ಎರಡೂವರೆ ಹರೆಯದ ಹಿಮಾನಿ ರಕ್ಷಿಸಲ್ಪಟ್ಟ ಹೆಣ್ಣು ಮಗು. ಮನೆಮಂದಿ ಅಂಗಳದಲ್ಲಿ ಕುಳಿತಿದ್ದ ಸಂದರ್ಭ ಅಂಗಳದಲ್ಲಿ ಆಟವಾಡುತ್ತಾ ಮಗು ಮನೆ ಆವರಣದಲ್ಲಿನ ತೆರೆದ ಬಾವಿಯೊಳಗೆ ಬಿದ್ದಿದೆ.
15 ಅಡಿ ಆಳದ ನೀರಿದ್ದ ಬಾವಿಯೊಳಗೆ ಬಿದ್ದ ಮಗುವನ್ನು ತಕ್ಷಣ ಚಿಕ್ಕಪ್ಪ ಜೀವನ್ ಎಂಬವರು ಹಗ್ಗ ಹಾಕಿ ರಕ್ಷಿಸಲು ಬಾವಿಗೆ ಇಳಿದಿದ್ದಾರೆ. ಆದರೆ ಈಜು ಬಾರದೇ ಇರುವುದರಿಂದ ಹಗ್ಗದ ಸಹಾಯದಲ್ಲಿ ನಿಂತು ಮಗುವಿನ ಕೈಯನ್ನು ಹಿಡಿದುಕೊಂಡು ಮೇಲೆ ಬರಲು ಸಾಧ್ಯವಾಗದೇ ಅಲ್ಲೇ ಉಳಿದಿದ್ರು. ಅದಾಗಲೇ ಒಂದು ಬಾರಿ ನೀರಿನೊಳಗೆ ಹೋಗಿ ಮಗು ಮೇಲೆ ಬಂದಿತ್ತು. ಟೀಂ ಪೆಲತ್ತಡಿ ಫ್ರೆಂಡ್ಸ್ನ ಯುವಕರು ಆಟವಾಡಲು ಗದ್ದೆಗೆ ಹೋಗುವ ಸಂದರ್ಭ ಮಗು ಬಾವಿಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಮಂದಿಯ ರೋದನ ಕಂಡು ತಕ್ಷಣ ಸ್ಥಳಕ್ಕೆ ಧಾವಿಸಿದ ಯುವಕರ ಪೈಕಿ ವಿವೇಕ್ ಅವರು ಅದೇ ಹಗ್ಗದ ಮೂಲಕ ಕೆಳಗಿಳಿದು ಬಾವಿಯ ನೀರಿಗೆ ಧುಮುಕಿದ್ದಾರೆ. ಇವರಿಗೆ ಸ್ನೇಹಿತ ಧನಂಜಯ್ ಸೇರಿದಂತೆ ಸ್ಥಳೀಯ ಯುವಕರು ಹಗ್ಗವನ್ನು ಹಿಡಿಯುವುದರ ಜೊತೆಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಗುವನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ವಿವೇಕ್ ಗಾರ್ಡನಿಂಗ್ ಸಂಸ್ಥೆಯಲ್ಲಿ ಸುಪರ್ ವೈಸರ್ ಆಗಿ ದುಡಿಯುತ್ತಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…