ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದ ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಸಂಬಂಧಿಸಿ ಒಟ್ಟು 7 ವಲಯಗಳ ಪೈಕಿ 1ನೇ ವಲಯದ ಕಾಮಗಾರಿಯ ಪ್ರಗತಿ ಎಲ್ಲರಿಗೂ ತೃಪ್ತಿ ತಂದಿದೆ. 2ನೇ ವಲಯದ ಕಾಮಗಾರಿ ಪೂರ್ತಿಗೊಳಿಸಲು ಸಮಯಾವಕಾಶ ನೀಡಲಾಗಿದೆ, ಪುರಸಭಾ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಈಗಾಗಲೇ ಅನುದಾನ ಬಿಡುಗಡೆಗೊಂಡಿದ್ದು, ಜಾಗದ ಸಮಸ್ಯೆಗಳನ್ನು ಸರಿ ಮಾಡುವುದಕ್ಕೆ ತಹಶೀಲ್ದಾರ್ಗೆ ಸೂಚನೆ ನೀಡಲಾಗಿದೆ. ಒಟ್ಟು ಕಾಮಗಾರಿಯನ್ನು 45 ಕೋ.ರೂ. ಹಾಗೂ 14.5 ಕೋ.ರೂ.ಗಳ ಎರಡು ವಿಭಾಗ ಮಾಡಿದ್ದೇವೆ. ಒಟ್ಟು 7 ವೆಟ್ವೆಲ್ಗಳ ಪೈಕಿ 5 ವೆಟ್ವೆಲ್ಗಳನ್ನು ಪೂರ್ತಿಗೊಳಿಸಲಾಗುತ್ತದೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…