ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್ನಲ್ಲಿರುವ ಮೆಸ್ಕಾಂ ಭವನದಲ್ಲಿ ನಡೆದಿದೆ.
ಪ್ರಭಾರ ಎಕ್ಸಿಕ್ಯುಟಿವ್ ಎಂಜಿನಿಯರ್ ಸಂತೋಷ್ ನಾಯಕ್ ಆಗಮಿಸಿದ ಬಳಕೆದಾರರ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ಅಹವಾಲುಗಳ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಬಳಕೆದಾರರ ಪರವಾಗಿ ಮಾತನಾಡಿದ ಲಕ್ಷ್ಮೀನಾರಾಯಣ ಬಂಟ್ವಾಳ, ಮೆಸ್ಕಾಂ ಸಾರ್ವಜನಿಕರಿಂದ ಎಲ್ಲವನ್ನೂ ಪಡೆಯುತ್ತಿದೆ, ಆದರೆ ಸಾರ್ವಜನಿಕರಿಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿ, ಕಚೇರಿಗೆ ಆಗಮಿಸುವವರಲ್ಲಿ ಯಾರು ಕಾಯಂ, ಯಾರು ಗುತ್ತಿಗೆ ನೌಕರರು ಎಂದು ಗೊತ್ತಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಗಮಿಸುತ್ತಿಲ್ಲ. ಸಾರ್ವಜನಿಕರ ದುಡ್ಡಿಗೆ ನ್ಯಾಯ ದೊರಕುತ್ತಿಲ್ಲ. ನಿವೃತ್ತರ ಪಿಂಚಣಿಗೂ ಜನರ ದುಡ್ಡನ್ನು ಪಡೆಯಲಾಗುತ್ತಿದೆ. ಒಂದು ಸಿಬ್ಬಂದಿಗೆ ಎರಡೆರಡು ಕೆಲಸ ಕೊಡಲಾಗುತ್ತಿದೆ. ಸರಕಾರದ ಮಾರ್ಗಸೂಚಿ ಪ್ರಕಾರ, ಕೆಇಆರ್ ಸಿಗೆ ಅಫಿದವಿತ್ ಕೊಟ್ಟಂತೆ ಕೆಲಸ ಮಾಡಿ, ಸರಕಾರದ ದುಡ್ಡು ಪೋಲಾಗದಂತೆ ನೋಡಿಕೊಳ್ಳಿ ಎಂದರು. ಇನ್ನು ಈ ಸಂದರ್ಭದಲ್ಲಿ ನಾರಾಯಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಪ್ರಭಾರ ಅಕೌಂಟ್ಸ್ ಆಫೀಸರ್ ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…