ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್ನಲ್ಲಿರುವ ಮೆಸ್ಕಾಂ ಭವನದಲ್ಲಿ ನಡೆದಿದೆ.
ಪ್ರಭಾರ ಎಕ್ಸಿಕ್ಯುಟಿವ್ ಎಂಜಿನಿಯರ್ ಸಂತೋಷ್ ನಾಯಕ್ ಆಗಮಿಸಿದ ಬಳಕೆದಾರರ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ಅಹವಾಲುಗಳ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ತಿಳಿಸಿದ್ದಾರೆ. ಬಳಕೆದಾರರ ಪರವಾಗಿ ಮಾತನಾಡಿದ ಲಕ್ಷ್ಮೀನಾರಾಯಣ ಬಂಟ್ವಾಳ, ಮೆಸ್ಕಾಂ ಸಾರ್ವಜನಿಕರಿಂದ ಎಲ್ಲವನ್ನೂ ಪಡೆಯುತ್ತಿದೆ, ಆದರೆ ಸಾರ್ವಜನಿಕರಿಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿ, ಕಚೇರಿಗೆ ಆಗಮಿಸುವವರಲ್ಲಿ ಯಾರು ಕಾಯಂ, ಯಾರು ಗುತ್ತಿಗೆ ನೌಕರರು ಎಂದು ಗೊತ್ತಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಗಮಿಸುತ್ತಿಲ್ಲ. ಸಾರ್ವಜನಿಕರ ದುಡ್ಡಿಗೆ ನ್ಯಾಯ ದೊರಕುತ್ತಿಲ್ಲ. ನಿವೃತ್ತರ ಪಿಂಚಣಿಗೂ ಜನರ ದುಡ್ಡನ್ನು ಪಡೆಯಲಾಗುತ್ತಿದೆ. ಒಂದು ಸಿಬ್ಬಂದಿಗೆ ಎರಡೆರಡು ಕೆಲಸ ಕೊಡಲಾಗುತ್ತಿದೆ. ಸರಕಾರದ ಮಾರ್ಗಸೂಚಿ ಪ್ರಕಾರ, ಕೆಇಆರ್ ಸಿಗೆ ಅಫಿದವಿತ್ ಕೊಟ್ಟಂತೆ ಕೆಲಸ ಮಾಡಿ, ಸರಕಾರದ ದುಡ್ಡು ಪೋಲಾಗದಂತೆ ನೋಡಿಕೊಳ್ಳಿ ಎಂದರು. ಇನ್ನು ಈ ಸಂದರ್ಭದಲ್ಲಿ ನಾರಾಯಣ ಭಟ್, ಸುಬ್ರಹ್ಮಣ್ಯ ಪ್ರಸಾದ್, ಪ್ರಭಾರ ಅಕೌಂಟ್ಸ್ ಆಫೀಸರ್ ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…