ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸಿಲೆ ಘಾಟ್ ತಿರುವಿನಲ್ಲಿ ವಾಹನ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಟೆಂಪೋದಲ್ಲಿದ್ದ ಇಪ್ಪಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆರು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…