ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿಯು. ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ ಎಂದು ಗುರುತಿಸಲಾಗಿದೆ. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ. ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…