ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ ನಡೆಯಲಿದೆ.

ದಾರ್ಶನಿಕ, ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು 1912ರ ಫೆ.21ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾಮಾಜಿಕ ಧಾರ್ಮಿಕ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಈ ಐತಿಹಾಸಿಕ, ಅಪೂರ್ವ ದಿನದ ಹಿನ್ನಲೆಯಲ್ಲಿ 2026ರ ಫೆ.21ರಂದು ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅನುಯಾಯಿಗಳಿಂದ ಶ್ರೀ ಗುರು ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಗಳು, ರಾಜಕೀಯ ಮುಖಂಡರೂ ಆದ ಪದ್ಮರಾಜ್ ಆರ್ ಪೂಜಾರಿ ತಿಳಿಸಿದ್ದಾರೆ. ಅವರು ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರು ಹಿಂದುಳಿದ ವರ್ಗಕ್ಕೆ ಬದುಕಿನ ಹೊಸತನದ ಹಾದಿಯನ್ನು ತೋರಿಸಿಕೊಟ್ಟವರು.

ಗುರುಗಳ ಕ್ರಾಂತಿಕಾರಿ ನಿರ್ಧಾರದಿಂದ ಇಂದು ಹಿಂದುಳಿದ ವರ್ಗದ ಜನರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ. ಇದರ ನೆನಪು ಮಾಡುವುದರೊಂದಿಗೆ ಫೆಬ್ರವರಿಯಲ್ಲಿ ನಡೆಯುವ ಸಮಾವೇಶ ಐತಿಹಾಸಿಕ ಕಾರ್ಯಕ್ರಮ ವಾಗಲಿದೆ ಎಂದರು. ಇನ್ನು ಈ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಜೈರಾಜ್ ಸೋಮಸುಂದರಂ, ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿಗಳಾದ ಸಂತೋಶ್ ಪೂಜಾರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



