ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಷಗಾನ ಕವಿ, ವಿಮರ್ಶಕ ಗಣೇಶ ಕೊಲೆಕಾಡಿ ಮುಲ್ಕಿ ಸಮೀಪದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪ್ರಸಿದ್ಧ ಹಿಮ್ಮೇಳ ವಾದಕರಾದ ದಿವಾಣ ಭೀಮ ಭಟ್ಟರಲ್ಲಿ ಭಾಗವತಿಕೆ ಮತ್ತು ಮದ್ದಳೆ ವಾದನವನ್ನು, ಹಾಗೂ ಛಂದಸ್ಸನ್ನು ಡಾ.ಶಿಮಂತೂರು ನಾರಾಯಣ ಶೆಟ್ಟಿ ಅವರಲ್ಲಿ ಅಭ್ಯಾಸ ಮಾಡಿದ್ದ ಗಣೇಶ ಕೊಲೆಕಾಡಿ ಸುಮಾರು 50ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನದಲ್ಲಿ ಬಳಕೆಯಾಗಿರುವ ಛಂದಸ್ಸಿನ ವೈಶಿಷ್ಟ್ಯದ ಕುರಿತು ವಿದ್ವತ್ತೂರ್ಣವಾಗಿ ಮಾತನಾಡಬಲ್ಲವರಾಗಿದ್ದ ಗಣೇಶ್, ತಮ್ಮ ಮನೆಯಲ್ಲೇ ಆಸಕ್ತರಿಗೆ ಛಂದಸ್ಸಿನ ಸೂಕ್ಷ್ಮತೆಗಳನ್ನು ವಿವಿಧ ಮಟ್ಟುಗಳನ್ನು ತಿಳಿಸಿಕೊಟ್ಟು ಬಹುಸಂಖ್ಯೆಯಲ್ಲಿ ಭಾಗವತರನ್ನು ರೂಪಿಸಿದ ಹೆಗ್ಗಳಿಕೆ ಹೊಂದಿದ್ದಾರೆ.
ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೊಳಗಾಗಿದ್ರು. ತಾಯಿಯೊಂದಿಗೆ ಮುಲ್ಕಿ ಬಳಿಯ ಮೈಲೊಟ್ಟು ಎಂಬಲ್ಲಿ ವಾಸವಾಗಿದ್ದ ಅವರಿಗೆ ಉಡುಪಿಯ ಯಕ್ಷಗಾನ ಕಲಾರಂಗ 2014ರಲ್ಲಿ ಮನೆಯೊಂದನ್ನು ನಿರ್ಮಿಸಿಕೊಟ್ಟಿತ್ತು. ಯಕ್ಷಗಾನ ಕಲಾರಂಗ ಅವರ ನಿರ್ದೇಶನದಲ್ಲಿ ಭಾಗವತಿಕೆಯ ಕಮ್ಮಟವನ್ನು ಸಹ ಆಯೋಜಿಸಿತ್ತು.
ಗಣೇಶ ಕೊಲೆಕಾಡಿ ಅವರಿಗೆ ಯಕ್ಷಗಾನ ಕಲಾರಂಗ ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಗಣೇಶ ಕೊಲೆಕಾಡಿ ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…